ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಯಾರೊಬ್ಬರೂ ದುರ್ವರ್ತನೆ ತೋರುವಂತಿಲ್ಲ.ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮಾಧ್ಯಮಗಳಿಗೆ ಅವರು ಭಾನುವಾರ ಪ್ರತಿಕ್ರಿಯೆ ನೀಡಿದ ಅವರು ಇದನ್ನು ಮನವಿ ಎಂದಾದೂ ಅಥವಾ ಎಚ್ಚರಿಕೆ ಎಂದಾದರೂ ಪರಿಗಣಿಸಿ ಎಂದಿದ್ದಾರೆ.
ಬೆಂಗಳೂರಿನಾದ್ಯಂತ 10 ಸಾವಿರಕ್ಕೂ ಹೆಚ್ಚು ಸಿ.ಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಎಲ್ಲರ ಚಲನವಲನಗಳ ಮೇಲೆ ಕಣ್ಣಿಡಲಾಗುವುದು. ಹೊಸವರ್ಷಾಚರಣೆ ವೇಳೆ ರಾಜ್ಯದ ಗೌರವ ಹಾಗೂ ಗಾಂಭೀರ್ಯ ಕಾಪಾಡಬೇಕು ಎಂದು ತಿಳಿಸಿದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 7 ದಿನ ಶೋಕಾಚಾರಣೆ ಘೋಷಣೆ ಮಾಡಿದ್ದು, ಕೇವಲ ಸರ್ಕಾರಿ ಕಾರ್ಯಕ್ರಮಗಳನ್ನು ಮಾತ್ರ ತಡೆ ಹಿಡಿಯಲಾಗಿದೆ. ಅದರ ಹೊರತಾಗಿ ಖಾಸಗಿ ಕಾರ್ಯಕ್ರಮಗಳಲ್ಲಿ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಹೀಗಾಗಿ ಖಾಸಗಿಯಾಗಿ ಹೊಸ ವರ್ಷಾಚರಣೆ ಮಾಡುವವರು ಮಾಡಿಕೊಳ್ಳಬಹುದು ಎಂದರು.
ಹೊಸವರ್ಷಾಚರಣೆ ಮಾರ್ಗಸೂಚಿ, ಸಮಯಾವಕಾಶದ ಬಗ್ಗೆ ಪೊಲೀಸರು ಮಾಹಿತಿ ನೀಡಲಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇರಬೇಕು. ಪಾಲಿಕೆ ಹಾಗೂ ಪೊಲೀಸರು ವ್ಯಾಪಾರಸ್ಥರಿಗೆ ಮಾರ್ಗಸೂಚಿ ನೀಡಲಿದ್ದಾರೆ. ಕಾಲಾವಕಾಶ ವಿಸ್ತರಣೆ ಮಾಡಿದ್ದರೂ ಯಾರೊಬ್ಬರೂ ಕಾನೂನು ಉಲ್ಲಂಘನೆ ಮಾಡುವಂತಿಲ್ಲ ಎಂದು ತಿಳಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…