ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ, ವಕ್ಛ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.
ವಿಧಾನಸಭೆಯಲ್ಲಿ ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ನ ಎಂ.ವೈ.ಪಾಟೀಲ್ ರವರ ಪ್ರಶ್ನೆಗೆ ಉತ್ತರ ನೀಡಿದ ಅವರು, ರಾಜ್ಯದಲ್ಲಿ 1,12,860 ಎಕರೆ ವಕ್ಛ್ ಆಸ್ತಿ ಇದೆ. ಈ ಆಸ್ತಿ ಸರ್ಕಾರದಿಂದ ಬಂದದ್ದಲ್ಲ. ಖಾಸಗಿ ವ್ಯಕ್ತಿಗಳು ಸಮಾಜದ ಅಭಿವೃದ್ಧಿಗೆ ಕೊಟ್ಟಿದ್ದು. ಇದರಲ್ಲಿ ಸುಮಾರು 17 ಸಾವಿರ ಎಕರೆ ಒತ್ತುವರಿಯಾಗಿದೆ. ಈ ಒತ್ತುವರಿಯನ್ನು ಮಾಡಿದವರು ಮುಸ್ಲಿಂ ಸಮುದಾಯದವರೇ ಎಂದು ಹೇಳಿದರು.
ವಕ್ಛ್ ಆಸ್ತಿ ಒತ್ತುವರಿ ತೆರವಿಗಾಗಿ ವಕ್ಛ್ ಅದಾಲತ್ನ್ನು ನಡೆಸಿದ್ದೇವೆ. ವಕ್ಛ್ ಅದಾಲತ್ನ ಬಗ್ಗೆ ಹಿಂದೆ ಪ್ರತಿಪಕ್ಷಗಳು ಟೀಕೆ ಮಾಡಿದ್ದವು. ಆದರೆ ಈ ಅದಾಲತ್ ನಡೆಸಿರುವುದು ವಕ್ಛ್ ಆಸ್ತಿ ಉಳಿಸಲು ಎಂದು ಅವರು ಹೇಳಿದರು.
ದೇವಸ್ಥಾನ, ಶಾಲೆಗಳಿಗೆ ಬಳಕೆಯಾಗಿರುವ ವಕ್ಛ್ ಆಸ್ತಿಗಳನ್ನು ನಾವು ಹಾಗೆಯೇ ಬಿಟ್ಟಿದ್ದೇವೆ. ಉಳಿದಂತೆ ವಕ್ಛ್ ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡಿರುವುದನ್ನು ತೆರವು ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.
ಈ ಹಂತದಲ್ಲಿ ಮಧ್ಯೆ ಪ್ರವೇಶಿಸಿ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, ವಕ್ಛ್ ಆಸ್ತಿ ಒತ್ತುವರಿ ತೆರವು ಮಾಡಿ. ನಮ್ಮದೇನು ಅಭ್ಯಂತರವಿಲ್ಲ. ಬೆಂಗಳೂರಿನ ವಿಂಡ್ಸರ್ ಮ್ಯಾನರ್ ಹೋಟೆಲ್ ಇರುವ ಜಾಗ ಸಹ ವಕ್ಛ್ ಆಸ್ತಿ. ಆ ಬಗ್ಗೆಯೂ ಸಚಿವರೇ ಮಾತನಾಡಿ. ವಕ್ಛ್ ಆಸ್ತಿ ಕಬಳಿಕೆಯ ಬಗ್ಗೆ ತನಿಖೆ ನಡೆಸಿ. ನಮ್ಮದು ನಮ್ಮದೇ, ನಿಮ್ಮದು ನಮ್ಮದೇ ಎಂದಾಗಬಾರದು ಎಂದು ಹೇಳಿದರು.
ಆಗ ಮಾತು ಮುಂದುವರೆಸಿದ ಸಚಿವ ಜಮೀರ್ ಅಹಮದ್ ಖಾನ್, ವಕ್ಛ್ ಆಸ್ತಿಗಳನ್ನು ಯಾರೇ ಒತ್ತುವರಿ ಮಾಡಿಕೊಂಡಿದ್ದರೂ ಅವುಗಳನ್ನು ವಾಪಸ್ ಪಡೆಯುತ್ತೇವೆ. ಅಫ್ಜಲ್ ಪುರ ತಾಲ್ಲೂಕಿನಲ್ಲೂ 30 ವಕ್ಛ್ ಆಸ್ತಿಗಳನ್ನು ಒತ್ತುವರಿ ಮಾಡಲಾಗಿತ್ತು. ಅವುಗಳಲ್ಲಿ 23 ಪ್ರಕರಣಗಳನ್ನು ಇತ್ಯರ್ಥಪಡಿಸಿ ಸ್ವಾಧಿನಕ್ಕೆ ಪಡೆದಿದ್ದೇವೆ ಎಂದು ತಿಳಿಸಿದರು.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…