ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ, ವಕ್ಛ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.
ವಿಧಾನಸಭೆಯಲ್ಲಿ ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ನ ಎಂ.ವೈ.ಪಾಟೀಲ್ ರವರ ಪ್ರಶ್ನೆಗೆ ಉತ್ತರ ನೀಡಿದ ಅವರು, ರಾಜ್ಯದಲ್ಲಿ 1,12,860 ಎಕರೆ ವಕ್ಛ್ ಆಸ್ತಿ ಇದೆ. ಈ ಆಸ್ತಿ ಸರ್ಕಾರದಿಂದ ಬಂದದ್ದಲ್ಲ. ಖಾಸಗಿ ವ್ಯಕ್ತಿಗಳು ಸಮಾಜದ ಅಭಿವೃದ್ಧಿಗೆ ಕೊಟ್ಟಿದ್ದು. ಇದರಲ್ಲಿ ಸುಮಾರು 17 ಸಾವಿರ ಎಕರೆ ಒತ್ತುವರಿಯಾಗಿದೆ. ಈ ಒತ್ತುವರಿಯನ್ನು ಮಾಡಿದವರು ಮುಸ್ಲಿಂ ಸಮುದಾಯದವರೇ ಎಂದು ಹೇಳಿದರು.
ವಕ್ಛ್ ಆಸ್ತಿ ಒತ್ತುವರಿ ತೆರವಿಗಾಗಿ ವಕ್ಛ್ ಅದಾಲತ್ನ್ನು ನಡೆಸಿದ್ದೇವೆ. ವಕ್ಛ್ ಅದಾಲತ್ನ ಬಗ್ಗೆ ಹಿಂದೆ ಪ್ರತಿಪಕ್ಷಗಳು ಟೀಕೆ ಮಾಡಿದ್ದವು. ಆದರೆ ಈ ಅದಾಲತ್ ನಡೆಸಿರುವುದು ವಕ್ಛ್ ಆಸ್ತಿ ಉಳಿಸಲು ಎಂದು ಅವರು ಹೇಳಿದರು.
ದೇವಸ್ಥಾನ, ಶಾಲೆಗಳಿಗೆ ಬಳಕೆಯಾಗಿರುವ ವಕ್ಛ್ ಆಸ್ತಿಗಳನ್ನು ನಾವು ಹಾಗೆಯೇ ಬಿಟ್ಟಿದ್ದೇವೆ. ಉಳಿದಂತೆ ವಕ್ಛ್ ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡಿರುವುದನ್ನು ತೆರವು ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.
ಈ ಹಂತದಲ್ಲಿ ಮಧ್ಯೆ ಪ್ರವೇಶಿಸಿ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, ವಕ್ಛ್ ಆಸ್ತಿ ಒತ್ತುವರಿ ತೆರವು ಮಾಡಿ. ನಮ್ಮದೇನು ಅಭ್ಯಂತರವಿಲ್ಲ. ಬೆಂಗಳೂರಿನ ವಿಂಡ್ಸರ್ ಮ್ಯಾನರ್ ಹೋಟೆಲ್ ಇರುವ ಜಾಗ ಸಹ ವಕ್ಛ್ ಆಸ್ತಿ. ಆ ಬಗ್ಗೆಯೂ ಸಚಿವರೇ ಮಾತನಾಡಿ. ವಕ್ಛ್ ಆಸ್ತಿ ಕಬಳಿಕೆಯ ಬಗ್ಗೆ ತನಿಖೆ ನಡೆಸಿ. ನಮ್ಮದು ನಮ್ಮದೇ, ನಿಮ್ಮದು ನಮ್ಮದೇ ಎಂದಾಗಬಾರದು ಎಂದು ಹೇಳಿದರು.
ಆಗ ಮಾತು ಮುಂದುವರೆಸಿದ ಸಚಿವ ಜಮೀರ್ ಅಹಮದ್ ಖಾನ್, ವಕ್ಛ್ ಆಸ್ತಿಗಳನ್ನು ಯಾರೇ ಒತ್ತುವರಿ ಮಾಡಿಕೊಂಡಿದ್ದರೂ ಅವುಗಳನ್ನು ವಾಪಸ್ ಪಡೆಯುತ್ತೇವೆ. ಅಫ್ಜಲ್ ಪುರ ತಾಲ್ಲೂಕಿನಲ್ಲೂ 30 ವಕ್ಛ್ ಆಸ್ತಿಗಳನ್ನು ಒತ್ತುವರಿ ಮಾಡಲಾಗಿತ್ತು. ಅವುಗಳಲ್ಲಿ 23 ಪ್ರಕರಣಗಳನ್ನು ಇತ್ಯರ್ಥಪಡಿಸಿ ಸ್ವಾಧಿನಕ್ಕೆ ಪಡೆದಿದ್ದೇವೆ ಎಂದು ತಿಳಿಸಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…