ರಾಜ್ಯ

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಈ ಕುರಿತು ವಿಧಾನಪರಿಷತ್‌ನಲ್ಲಿ ಪ್ರಸ್ತಾಪಿಸಿದ ಗೃಹ ಸಚಿವ ಪರಮೇಶ್ವರ್‌ ಅವರು, ಕಾನೂನು ಪಾಲನೆ ವಿಚಾರದಲ್ಲಿ ಪರಿಣಾಮಕಾರಿ ಕೆಲಸ ಆಗುತ್ತಿದೆ. ತರಬೇತಿನಿರತ ಪೊಲೀಸರನ್ನು ಕೂಡ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿ ಇವೆ. ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. 4 ವರ್ಷದಿಂದ ನೇಮಕಾತಿ ಆಗದಿರುವುದು ಸಮಸ್ಯೆ ಹೆಚ್ಚಾಗಲು ಕಾರಣ. ನಮ್ಮ ಸರ್ಕಾರ ಈಗ ನೇಮಕಾತಿ ಮಾಡಿಕೊಳ್ಳುತ್ತಿದೆ. ಕಾನೂನು ಸುವ್ಯವಸ್ಥೆ ಮತ್ತಷ್ಟು ಬಲಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

1 hour ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

1 hour ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

1 hour ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

1 hour ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

2 hours ago