ರಾಜ್ಯ

ವೈದ್ಯ, ನರ್ಸ್‌ ಹುದ್ದೆ ಭರ್ತಿಗೆ ಒಂದು ತಿಂಗಳೊಳಗೆ ಕ್ರಮ : ಆರೋಗ್ಯ ಸಚಿವ ಗುಂಡೂರಾವ್‌

ಬೆಳಗಾವಿ : ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‍ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಪ್ರಶ್ನೋತ್ತರ ಅವಧಿಯಲ್ಲಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಇಲಾಖೆಯಲ್ಲಿ ಖಾಲಿ ಇರುವ 337 ತಜ್ಞ ವೈದ್ಯರು, 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಈಗಾಗಲೆ ಅನುಮತಿ ನೀಡಲಾಗಿದೆ. ಸರ್ಕಾರಿ ಕೋಟಾದಡಿ ವ್ಯಾಸಂಗ ಪೂರೈಸಿದ ವೈದ್ಯರು, ತಜ್ಞ ವೈದ್ಯರು 01 ವರ್ಷ ಕಡ್ಡಾಯ ಸರ್ಕಾರಿ ಸೇವೆ ಕೈಗೊಳ್ಳುವ ಕಾರ್ಯಕ್ರಮದಡಿ 1500 ವೈದ್ಯರನ್ನು ನೇಮಕ ಮಾಡಲು ಕೂಡ ಕ್ರಮ ಕೈಗೊಳ್ಳಲಾಗಿದೆ. ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ 120 ತಜ್ಞ ವೈದ್ಯರು ಮತ್ತು 100 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಹಮತಿಸಿದೆ.

ಇದನ್ನು ಓದಿ: ಸುಪ್ರೀಂಕೋರ್ಟ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಹಿನ್ನಡೆ

ಈ ಪ್ರಕ್ರಿಯೆಯೂ ಕೂಡ ಪ್ರಗತಿಯಲ್ಲಿದೆ. ತಜ್ಞ ವೈದ್ಯರ ನೇಮಕಾತಿ ಕುರಿತಂತೆ ಹೈಕೋರ್ಟ್‍ನಲ್ಲಿದ್ದ ಪ್ರಕರಣ ಕೂಡ ಅಂತಿಮ ಹಂತದಲ್ಲಿದ್ದು, ಶೀಘ್ರ ಇತ್ಯರ್ಥಗೊಳ್ಳಲಿದೆ. ರಾಜ್ಯದಲ್ಲಿ 600 ಶುಶ್ರೂಷಾಧಿಕಾರಿಗಳು, 400 ಕಿರಿಯ ಪ್ರಯೋಗಶಾಲಾ ತಂತ್ರಜ್ಞರು ಹಾಗೂ 400 ಫಾರ್ಮಾಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಕೌನ್ಸಿಲಿಂಗ್ ಮೂಲಕ ನೇಮಕ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದರು.

ವಿವಿಧ ಇಲಾಖೆಗಳಿಗೆ ನಿಯೋಜನೆ ಮೇಲೆ ತೆರಳಿದ್ದ ಇಲಾಖೆಯ ವೈದ್ಯರು, ಆಹಾರ ಗುಣಮಟ್ಟ ಸುರಕ್ಷತಾ ಅಧಿಕಾರಿಗಳ ನಿಯೋಜನೆಯನ್ನು ರದ್ದುಗೊಳಿಸಿ, ಇಲಾಖೆಗೆ ವಾಪಸ್ ಪಡೆಯಲು ಕ್ರಮ ಕೈಗೊಳ್ಳಲಾಗಿದ್ದು, ಇಲಾಖೆಗೆ ಅಗತ್ಯ ಇರುವ ಕಡೆಗಳಲ್ಲಿ ಇವರನ್ನು ನೇಮಕ ಮಾಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

13 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

13 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

13 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

15 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

15 hours ago