ರಾಜ್ಯ

ವೈದ್ಯ, ನರ್ಸ್‌ ಹುದ್ದೆ ಭರ್ತಿಗೆ ಒಂದು ತಿಂಗಳೊಳಗೆ ಕ್ರಮ : ಆರೋಗ್ಯ ಸಚಿವ ಗುಂಡೂರಾವ್‌

ಬೆಳಗಾವಿ : ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‍ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಪ್ರಶ್ನೋತ್ತರ ಅವಧಿಯಲ್ಲಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಇಲಾಖೆಯಲ್ಲಿ ಖಾಲಿ ಇರುವ 337 ತಜ್ಞ ವೈದ್ಯರು, 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಈಗಾಗಲೆ ಅನುಮತಿ ನೀಡಲಾಗಿದೆ. ಸರ್ಕಾರಿ ಕೋಟಾದಡಿ ವ್ಯಾಸಂಗ ಪೂರೈಸಿದ ವೈದ್ಯರು, ತಜ್ಞ ವೈದ್ಯರು 01 ವರ್ಷ ಕಡ್ಡಾಯ ಸರ್ಕಾರಿ ಸೇವೆ ಕೈಗೊಳ್ಳುವ ಕಾರ್ಯಕ್ರಮದಡಿ 1500 ವೈದ್ಯರನ್ನು ನೇಮಕ ಮಾಡಲು ಕೂಡ ಕ್ರಮ ಕೈಗೊಳ್ಳಲಾಗಿದೆ. ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ 120 ತಜ್ಞ ವೈದ್ಯರು ಮತ್ತು 100 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಹಮತಿಸಿದೆ.

ಇದನ್ನು ಓದಿ: ಸುಪ್ರೀಂಕೋರ್ಟ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಹಿನ್ನಡೆ

ಈ ಪ್ರಕ್ರಿಯೆಯೂ ಕೂಡ ಪ್ರಗತಿಯಲ್ಲಿದೆ. ತಜ್ಞ ವೈದ್ಯರ ನೇಮಕಾತಿ ಕುರಿತಂತೆ ಹೈಕೋರ್ಟ್‍ನಲ್ಲಿದ್ದ ಪ್ರಕರಣ ಕೂಡ ಅಂತಿಮ ಹಂತದಲ್ಲಿದ್ದು, ಶೀಘ್ರ ಇತ್ಯರ್ಥಗೊಳ್ಳಲಿದೆ. ರಾಜ್ಯದಲ್ಲಿ 600 ಶುಶ್ರೂಷಾಧಿಕಾರಿಗಳು, 400 ಕಿರಿಯ ಪ್ರಯೋಗಶಾಲಾ ತಂತ್ರಜ್ಞರು ಹಾಗೂ 400 ಫಾರ್ಮಾಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಕೌನ್ಸಿಲಿಂಗ್ ಮೂಲಕ ನೇಮಕ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದರು.

ವಿವಿಧ ಇಲಾಖೆಗಳಿಗೆ ನಿಯೋಜನೆ ಮೇಲೆ ತೆರಳಿದ್ದ ಇಲಾಖೆಯ ವೈದ್ಯರು, ಆಹಾರ ಗುಣಮಟ್ಟ ಸುರಕ್ಷತಾ ಅಧಿಕಾರಿಗಳ ನಿಯೋಜನೆಯನ್ನು ರದ್ದುಗೊಳಿಸಿ, ಇಲಾಖೆಗೆ ವಾಪಸ್ ಪಡೆಯಲು ಕ್ರಮ ಕೈಗೊಳ್ಳಲಾಗಿದ್ದು, ಇಲಾಖೆಗೆ ಅಗತ್ಯ ಇರುವ ಕಡೆಗಳಲ್ಲಿ ಇವರನ್ನು ನೇಮಕ ಮಾಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago