caste census g parameshwara
ಬೆಂಗಳೂರು: ಪಾಕಿಸ್ತಾನದ ಪ್ರಜೆಗಳನ್ನು ಗುರುತಿಸಲು ಎಲ್ಲಾ ಜಿಲ್ಲೆಗಳಲ್ಲೂ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾ ಎಸ್ಪಿಗಳಿಗೆ ಹಾಗೂ ನಗರ ಪ್ರದೇಶಗಳ ಆಯುಕ್ತರುಗಳಿಗೆ ಈ ಬಗ್ಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಗೃಹಸಚಿವಾಲಯದಿಂದ ನಿನ್ನೆ ಸೂಚನೆ ಬಂದಿದೆ. ದೀರ್ಘಕಾಲದ ವೀಸಾ ಹೊಂದಿರುವವರಿಗೆ ಕೇಂದ್ರ ಸರ್ಕಾರವೇ ವಿನಾಯಿತಿ ನೀಡಿದೆ. ಪ್ರವಾಸಿಗರು ಸೇರಿದಂತೆ ಒಂದು ರೀತಿಯ ವೀಸಾ ಹೊಂದಿದವರನ್ನು ವಾಪಸ್ ಕಳುಹಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡಿರುವುದು ಕಂಡುಬಂದಿಲ್ಲ. ಹಾಗಾಗಿ ಅವರನ್ನೂ ವಾಪಸ್ ಕಳುಹಿಸುವುದು ಅನಿವಾರ್ಯವಾಗಿದೆ ಎಂದರು.
ಎಷ್ಟು ಜನ ಪಾಕಿಸ್ತಾನದ ಪ್ರಜೆಗಳಿದ್ದಾರೆ ಎಂಬುದು ಈ ಕ್ಷಣಕ್ಕೆ ಸ್ಪಷ್ಟ ಮಾಹಿತಿ ಇಲ್ಲ. ಆದರೆ ಎಲ್ಲಾ ಕಡೆ ಪರಿಶೀಲನೆ ನಡೆಯುತ್ತಿದೆ ಎಂದು ಹೇಳಿದರು. ಪಹಲ್ಗಾಮ್ ದಾಳಿಯ ವಿರುದ್ಧ ಎಲ್ಲಾ ಭಾಗದಲ್ಲೂ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇದು ನಿರಂತರ ಪ್ರಕ್ರಿಯೆ ಎಂದರು.
ಇನ್ನು ಪಹಲ್ಗಾಮ್ ದಾಳಿಯಲ್ಲಿ ಭದ್ರತಾ ವೈಫಲ್ಯ ಇದೆ ಎಂದು ಎಲ್ಲರಿಗೂ ಗೊತ್ತಿದೆ. ನಾನೂ ಸೇರಿದಂತೆ ಪ್ರತಿಯೊಬ್ಬರೂ ಅದನ್ನು ಪ್ರಸ್ತಾಪಿಸಿದ್ದಾರೆ ಎಂದು ಹೇಳಿದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…