ರಾಜ್ಯ

ದೇಸಿ ತಿನಿಸುಗಳ ಬೇಡಿಕೆ ಹೆಚ್ಚಸಲು ಕ್ರಮ : ಎನ್ ಚಲುವರಾಯಸ್ವಾಮಿ

ಬೆಂಗಳೂರು: ಮರೆತು ಹೋದ ಭಾರತೀಯ ಆಹಾರ ಪದ್ದತಿಗಳನ್ನು ಪುನರ್ ಪರಿಚಯಿಸಿ ದೇಸಿ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿಸಲು ರಾಜ್ಯ ಸರ್ಕಾರ ಗಮನಹರಿಸಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು.

ನಗರದ ನಳಪಾಕ ಹೋಟೆಲ್ ನಲ್ಲಿ ಬೆಳ್ಳಿಹಬ್ಬದ ವರ್ಷಾಚರಣೆ ಸಂದರ್ಭದಲ್ಲಿ ಏರ್ಪಡಿಸಿದ್ದ ಸಂಕ್ರಾಂತಿ ಸವಿ ರುಚಿ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು.

ಸಿರಿ ಧನ್ಯಾಗಳು ನಮ್ಮ ಆರೋಗ್ಯಕ್ಕೆ ಪೂರಕ . ಅದರ ಉತ್ತೇಜನಕ್ಕೆ ಜ‌. 23-25 ರ ವರಗೆ ಬೆಂಗಳೂರಿನ ಅರಮೆನೆ ಮೈದಾನದಲ್ಲಿ ಅಂತರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳ ಆಯೋಜಿಸಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.

ಬೆಂಗಳೂರು ಸಂಪೂರ್ಣ ಕರ್ನಾಟಕದ ಪರಿಕಲ್ಪನೆಯ ನಗರ. ಇಲ್ಲಿ ಎಲ್ಲಾ ತರದ ತಿನಿಸು ಲಭ್ಯ. ಅದರೆ ನಮ್ಮ ಕರ್ನಾಟಕದ ಆಹಾರಗಳ ಸತ್ವ ಮತ್ತು ಸವಿಯನ್ನು ಉಣ ಬಡಿಸುತ್ತಾ 25 ವರ್ಷಕ್ಕೆ ಪಾದಾರ್ಪಣೆ ಮಾಡಿದ ನಳಪಾಕ ಹೋಟೆಲ್ ನ ಯಶಸ್ಸು ಅಭಿನಂದನೀಯ ಎಂದು ಪ್ರಶಂಸಿದರು.

ಸಂಕ್ರಾಂತಿ ರೈತರ ಸಂಭ್ರಮ ಹಂಚಿಕೆಯ ಸುಗ್ಗಿ ಹಬ್ಬ. ಈ ಬಾರಿ ಜ.14 ರಂದು ನಾಗಮಂಗಲ ಕ್ಷೇತ್ರದ ದೇವಲಾಪುರ ಗ್ರಾಮದಲ್ಲಿ ವಿಶೇಷ ಸಂಕ್ರಾಂತಿ ಕಾರ್ಯಕ್ರಮ‌ ಆಯೋಜಿಸಿದ್ದು ರೈತಾಪಿ ಕುಟುಂಬದೊಂದಿಗೆ ಒಂದು ದಿನ ಕಾಲಕಳೆಯಲು ಬಯಸಿದ್ದೇನೆ ಎಂದು ಅವರು ತಿಳಿಸಿದರು.

ಶಾಸಕ ಗೋಪಾಲಯ್ಯ  ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಚೌಕಾಸಿ…!

ಚೌಕಾಸಿ...! ಸಾಮಾನ್ಯವಾಗಿ ಫುಟ್ಟ್ಪಾತ್ ವ್ಯಾಪಾರದಲ್ಲಿ ನಡೆಯುವುದು ಚೌಕಾಸಿ... ಈಗ, ಫುಟ್ಪಾತ್ನಲ್ಲಿ ಪಾದಚಾರಿ-ವ್ಯಾಪಾರಿಗಳ ನಡುವೆಯೂ ನಡೆಯಬಹುದು ಓಡಾಡುವ ರಸ್ತೆಗಾಗಿ ಚೌಕಾಸಿ !…

2 hours ago

ಓದುಗರ ಪತ್ರ: ವಿಧಾನ ಮಂಡಲ ಅಧಿವೇಶನದ ಉದ್ದೇಶ ಈಡೇರುತ್ತಿದೆಯೇ?

ಕಳೆದ ಒಂದು ವಾರದಿಂದ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನ, ಡಿ. ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾದ ನಂತರ…

2 hours ago

ಓದುಗರ ಪತ್ರ: ಸಹಕಾರ ತತ್ವ ಎಲ್ಲರಿಗೂ ಕ್ಷೇಮ

ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಮಹಾಬಲಿಪುರಂನಲ್ಲಿ ನಡೆದ ದಕ್ಷಿಣ ವಲಯ ಮಂಡಳಿಯ ಸಭೆಯಲ್ಲಿ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್…

2 hours ago

ಓದುಗರ ಪತ್ರ: ಮೌಲ್ಯನಿಷ್ಠ ರಾಜಕಾರಣದ ಕೊಂಡಿಯೊಂದು ಕಳಚಿದಂತೆ

ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ನಿಧನದಿಂದ ಮೌಲ್ಯನಿಷ್ಠ ರಾಜಕಾರಣದ ಒಂದು ಕೊಂಡಿಕಳಚಿದಂತಾಗಿದೆ. ಸರಳ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದ ನಾಗೇಶ್…

2 hours ago

ಸಮಾವೇಶದಿಂದ ದಕ್ಷಿಣ ರಾಜ್ಯಗಳ ದನಿಗೆ ಮರುಜೀವ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಹನ್ನೆರಡು ವರ್ಷಗಳ ನಂತರ ನಡೆದ ದಕ್ಷಿಣ ರಾಜ್ಯಗಳ ಎರಡು ದಿನಗಳ…

2 hours ago

ಗೌಜಲಕ್ಕಿ

ಸ್ವಾಮಿ ಪೊನ್ನಾಚಿ ಬೆಟ್ಟದ ಕಿಬ್ಬಿಯನ್ನು ಹತ್ತುತ್ತಾ ‘ಹೋ ಹೋ’ ಎಂದು ಸದ್ದು ಮಾಡಿ ದನಗಳನ್ನು  ಓಡಿಸುತ್ತಾ ಬರುತ್ತಿದ್ದ ಕಾಕಿಗೆ ಬಾಯಿ…

2 hours ago