ರಾಜ್ಯ

ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾದಲ್ಲಿ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ಶಾಸಕ ಡಾ. ಎಚ್.ಡಿ.ರಂಗನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂ:82(1612) ಕ್ಕೆ ಉತ್ತರ ನೀಡಿದರು.

ಇದನ್ನು ಓದಿ: 2023ರಂತೆ 2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಸಿಎಂ ಸಿದ್ದರಾಮಯ್ಯ

2024-25ರಲ್ಲಿ ನಬಾರ್ಡ್ ನಿಂದ 5600 ಕೋಟಿ ಕಮ್ಮಿ ಬಡ್ಡಿದರದಲ್ಲಿ ಬರಬೇಕಾಗಿತ್ತು. ಅದರಲ್ಲಿ 3415 ಕೋಟಿ ರೂ. ಬಂದಿದ್ದು, 2185 ಕೋಟಿ ರೂ.ಗಳ ಕೊರತೆಯಾಗಿದೆ. ಮಧುಗಿರಿ ತಾಲ್ಲೂಕಿಗೆ ಹೆಚ್ಚು ಅನುದಾನ ನೀಡಿ, ಕುಣಿಗಲ್ ತಾಲ್ಲೂಕಿಗೆ ಕಡಿಮೆಯಾಗಿರುವ ಬಗ್ಗೆ ಶಾಸಕರು ತಿಳಿಸಿದ್ದಾರೆ. ಆದರೆ ಮಧುಗಿರಿಯಲ್ಲಿ ಶೇ. 26 ರಷ್ಟು ಎಸ್ಸಿ, ಎಸ್ಟಿ ಸಮುದಾಯದವರಿದ್ದು, ಕುಣಿಗಲ್‌ನಲ್ಲಿ ಕೇವಲ ಶೇ.8ರಷ್ಟು ಮಾತ್ರ ಎಸ್‌ಸಿ, ಎಸ್‌ಟಿಗೆ ಸೇರಿದ ಸಮುದಾಯಗಳಿವೆ. ಆದ್ದರಿಂದ ಅನುದಾನದ ಹೆಚ್ಚಿನ ಪಾಲು ಮಧುಗಿರಿಗೆ ನೀಡಿರಬಹುದು. ಆದರೆ ಮುಂದಿನ ವರ್ಷದಿಂದ ಈ ತಾರತಮ್ಯವನ್ನು ಕಾನೂನು ಪ್ರಕಾರ ನಿವಾರಣೆ ಮಾಡಲಾಗುವುದು ಎಂದರು.

ಕುಣಿಗಲ್ ತಾಲ್ಲೂಕಿನಲ್ಲಿ 4 ಲಕ್ಷ ಪಹಣಿ ಇದ್ದು, 1 ಲಕ್ಷ ರೈತರಿದ್ದಾರೆ. ಆದರೆ ಡಿಸಿಸಿ ಬ್ಯಾಂಕ್ ಗಳ ಮೂಲಕ ಕೇವಲ 20 ರೈತರಿಗೆ ಮಾತ್ರ ಅಲ್ಪಾವಧಿ ಸಾಲ ಕೊಟ್ಟಿರುತ್ತಾರೆ. ರೈತರ ಹಣವನ್ನು ತಮ್ಮ ಕಪಿಮುಷ್ಟಿಯಲ್ಲಿ ಹಿಡಿದಿರುವ ಇಂತಹ ಸಂಘಗಳಿಂದ ರೈತರ ರಕ್ಷಣೆಗೆ ಸರ್ಕಾರ ಬರಬೇಕಿದೆ ಎಂದು ಕುಣಿಗಲ್ ಶಾಸಕ ಡಾ. ಎಚ್.ಡಿ.ರಂಗನಾಥ್ ಅವರು ತಮ್ಮ ಪ್ರಶ್ನೆಯ ಮೂಲಕ ಮುಖ್ಯಮಂತ್ರಿಗಳ ಗಮನ ಸೆಳೆದರು.

ಆಂದೋಲನ ಡೆಸ್ಕ್

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

5 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

6 hours ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

6 hours ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

6 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

6 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

7 hours ago