ಬೆಳಗಾವಿ: ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ಶಾಸಕ ಡಾ. ಎಚ್.ಡಿ.ರಂಗನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂ:82(1612) ಕ್ಕೆ ಉತ್ತರ ನೀಡಿದರು.
ಇದನ್ನು ಓದಿ: 2023ರಂತೆ 2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಸಿಎಂ ಸಿದ್ದರಾಮಯ್ಯ
2024-25ರಲ್ಲಿ ನಬಾರ್ಡ್ ನಿಂದ 5600 ಕೋಟಿ ಕಮ್ಮಿ ಬಡ್ಡಿದರದಲ್ಲಿ ಬರಬೇಕಾಗಿತ್ತು. ಅದರಲ್ಲಿ 3415 ಕೋಟಿ ರೂ. ಬಂದಿದ್ದು, 2185 ಕೋಟಿ ರೂ.ಗಳ ಕೊರತೆಯಾಗಿದೆ. ಮಧುಗಿರಿ ತಾಲ್ಲೂಕಿಗೆ ಹೆಚ್ಚು ಅನುದಾನ ನೀಡಿ, ಕುಣಿಗಲ್ ತಾಲ್ಲೂಕಿಗೆ ಕಡಿಮೆಯಾಗಿರುವ ಬಗ್ಗೆ ಶಾಸಕರು ತಿಳಿಸಿದ್ದಾರೆ. ಆದರೆ ಮಧುಗಿರಿಯಲ್ಲಿ ಶೇ. 26 ರಷ್ಟು ಎಸ್ಸಿ, ಎಸ್ಟಿ ಸಮುದಾಯದವರಿದ್ದು, ಕುಣಿಗಲ್ನಲ್ಲಿ ಕೇವಲ ಶೇ.8ರಷ್ಟು ಮಾತ್ರ ಎಸ್ಸಿ, ಎಸ್ಟಿಗೆ ಸೇರಿದ ಸಮುದಾಯಗಳಿವೆ. ಆದ್ದರಿಂದ ಅನುದಾನದ ಹೆಚ್ಚಿನ ಪಾಲು ಮಧುಗಿರಿಗೆ ನೀಡಿರಬಹುದು. ಆದರೆ ಮುಂದಿನ ವರ್ಷದಿಂದ ಈ ತಾರತಮ್ಯವನ್ನು ಕಾನೂನು ಪ್ರಕಾರ ನಿವಾರಣೆ ಮಾಡಲಾಗುವುದು ಎಂದರು.
ಕುಣಿಗಲ್ ತಾಲ್ಲೂಕಿನಲ್ಲಿ 4 ಲಕ್ಷ ಪಹಣಿ ಇದ್ದು, 1 ಲಕ್ಷ ರೈತರಿದ್ದಾರೆ. ಆದರೆ ಡಿಸಿಸಿ ಬ್ಯಾಂಕ್ ಗಳ ಮೂಲಕ ಕೇವಲ 20 ರೈತರಿಗೆ ಮಾತ್ರ ಅಲ್ಪಾವಧಿ ಸಾಲ ಕೊಟ್ಟಿರುತ್ತಾರೆ. ರೈತರ ಹಣವನ್ನು ತಮ್ಮ ಕಪಿಮುಷ್ಟಿಯಲ್ಲಿ ಹಿಡಿದಿರುವ ಇಂತಹ ಸಂಘಗಳಿಂದ ರೈತರ ರಕ್ಷಣೆಗೆ ಸರ್ಕಾರ ಬರಬೇಕಿದೆ ಎಂದು ಕುಣಿಗಲ್ ಶಾಸಕ ಡಾ. ಎಚ್.ಡಿ.ರಂಗನಾಥ್ ಅವರು ತಮ್ಮ ಪ್ರಶ್ನೆಯ ಮೂಲಕ ಮುಖ್ಯಮಂತ್ರಿಗಳ ಗಮನ ಸೆಳೆದರು.
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…
ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…
ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…