ರಾಜ್ಯ

ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾದಲ್ಲಿ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ಶಾಸಕ ಡಾ. ಎಚ್.ಡಿ.ರಂಗನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂ:82(1612) ಕ್ಕೆ ಉತ್ತರ ನೀಡಿದರು.

ಇದನ್ನು ಓದಿ: 2023ರಂತೆ 2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಸಿಎಂ ಸಿದ್ದರಾಮಯ್ಯ

2024-25ರಲ್ಲಿ ನಬಾರ್ಡ್ ನಿಂದ 5600 ಕೋಟಿ ಕಮ್ಮಿ ಬಡ್ಡಿದರದಲ್ಲಿ ಬರಬೇಕಾಗಿತ್ತು. ಅದರಲ್ಲಿ 3415 ಕೋಟಿ ರೂ. ಬಂದಿದ್ದು, 2185 ಕೋಟಿ ರೂ.ಗಳ ಕೊರತೆಯಾಗಿದೆ. ಮಧುಗಿರಿ ತಾಲ್ಲೂಕಿಗೆ ಹೆಚ್ಚು ಅನುದಾನ ನೀಡಿ, ಕುಣಿಗಲ್ ತಾಲ್ಲೂಕಿಗೆ ಕಡಿಮೆಯಾಗಿರುವ ಬಗ್ಗೆ ಶಾಸಕರು ತಿಳಿಸಿದ್ದಾರೆ. ಆದರೆ ಮಧುಗಿರಿಯಲ್ಲಿ ಶೇ. 26 ರಷ್ಟು ಎಸ್ಸಿ, ಎಸ್ಟಿ ಸಮುದಾಯದವರಿದ್ದು, ಕುಣಿಗಲ್‌ನಲ್ಲಿ ಕೇವಲ ಶೇ.8ರಷ್ಟು ಮಾತ್ರ ಎಸ್‌ಸಿ, ಎಸ್‌ಟಿಗೆ ಸೇರಿದ ಸಮುದಾಯಗಳಿವೆ. ಆದ್ದರಿಂದ ಅನುದಾನದ ಹೆಚ್ಚಿನ ಪಾಲು ಮಧುಗಿರಿಗೆ ನೀಡಿರಬಹುದು. ಆದರೆ ಮುಂದಿನ ವರ್ಷದಿಂದ ಈ ತಾರತಮ್ಯವನ್ನು ಕಾನೂನು ಪ್ರಕಾರ ನಿವಾರಣೆ ಮಾಡಲಾಗುವುದು ಎಂದರು.

ಕುಣಿಗಲ್ ತಾಲ್ಲೂಕಿನಲ್ಲಿ 4 ಲಕ್ಷ ಪಹಣಿ ಇದ್ದು, 1 ಲಕ್ಷ ರೈತರಿದ್ದಾರೆ. ಆದರೆ ಡಿಸಿಸಿ ಬ್ಯಾಂಕ್ ಗಳ ಮೂಲಕ ಕೇವಲ 20 ರೈತರಿಗೆ ಮಾತ್ರ ಅಲ್ಪಾವಧಿ ಸಾಲ ಕೊಟ್ಟಿರುತ್ತಾರೆ. ರೈತರ ಹಣವನ್ನು ತಮ್ಮ ಕಪಿಮುಷ್ಟಿಯಲ್ಲಿ ಹಿಡಿದಿರುವ ಇಂತಹ ಸಂಘಗಳಿಂದ ರೈತರ ರಕ್ಷಣೆಗೆ ಸರ್ಕಾರ ಬರಬೇಕಿದೆ ಎಂದು ಕುಣಿಗಲ್ ಶಾಸಕ ಡಾ. ಎಚ್.ಡಿ.ರಂಗನಾಥ್ ಅವರು ತಮ್ಮ ಪ್ರಶ್ನೆಯ ಮೂಲಕ ಮುಖ್ಯಮಂತ್ರಿಗಳ ಗಮನ ಸೆಳೆದರು.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

2 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

2 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

2 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

2 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

2 hours ago