ರಾಜ್ಯ

ಕಾರ್ಯಕರ್ತರು ಹಾಗೂ ಜನ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ: ಡಿಕೆಶಿ

ಬೆಂಗಳೂರು : ಪಕ್ಷವನ್ನು ನಾನೊಬ್ಬನೇ ಅಧಿಕಾರಕ್ಕೆ ತಂದಿರುವುದಾಗಿ ಯಾವತ್ತೂ ಹೇಳಿಲ್ಲ, ಹೇಳುವುದೂ ಇಲ್ಲ. ಕಾರ್ಯಕರ್ತರು ಹಾಗೂ ಜನ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

“ಶಿವಕುಮಾರ್ ಒಬ್ಬರೇ ಪಕ್ಷವನ್ನು ಅಧಿಕಾರಕ್ಕೆ ತಂದಿಲ್ಲ” ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಮಾಧ್ಯಮಗಳು ನಗರದ ಗಾಂಧಿಭವನದ ಬಳಿ ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು:

“ಪಕ್ಷದ ಕಾರ್ಯಕರ್ತರು, ನಾವು, ನೀವು ಸೇರಿ, ರಾಜ್ಯದ ಜನರು, ಪ್ರತಿ ಹಳ್ಳಿಯಲ್ಲಿರುವವರು ಬಡಿದಾಡಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಡಿ.ಕೆ. ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿದ್ದಾನೆ ಎಂದು ಇಂದು, ನಾಳೆ, ಎಂದಿಗೂ, ಯಾವತ್ತಿಗೂ ಹೇಳುವುದಿಲ್ಲ” ಎಂದರು.

ಎರಡೂವರೆ ವರ್ಷಗಳ ನಂತರ ಸಚಿವ ಸಂಪುಟ ಪುನರ್ ರಚನೆ ಆಗುತ್ತದೆ ಎಂದು ಚೀಫ್ ವಿಪ್ ಅಶೋಕ್ ಪಟ್ಟಣ ಹೇಳಿದ್ದಾರೆ ಎಂದು ಕೇಳಿದಾಗ, “ಪಕ್ಷದಲ್ಲಿ ಆಂತರಿಕವಾಗಿ ಒಂದಷ್ಟು ವಿಚಾರಗಳು ಚರ್ಚೆಯಾಗಿರುತ್ತವೆ. ಅದನ್ನು ನಾನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಅದನ್ನು ಚರ್ಚೆ ಮಾಡಲು ನಾನು ಹೋಗುವುದಿಲ್ಲ, ನನಗೆ ಇರುವ ಮಾಹಿತಿ ಪ್ರಕಾರ ಆ ರೀತಿ ಚರ್ಚೆ ನಡೆದಿಲ್ಲ” ಎಂದು ಹೇಳಿದರು.

andolanait

Recent Posts

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

2 hours ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

2 hours ago

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…

2 hours ago

ಬಂಡೀಪಾಳ್ಯದಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಶೀಘ್ರ ಆರಂಭ

ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…

2 hours ago

ನೂರು ಸಾವಿರದ ಗಡಿ ದಾಟಿದ ಆಂದೋಲನ ಇನ್ ಸ್ಟಾ ಪೇಜ್ ಹಿಂಬಾಲಕರು

‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…

2 hours ago

ದುಸ್ಥಿತಿಯಲ್ಲಿ ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆ ಕಟ್ಟಡ

ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…

2 hours ago