Darshan
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಹಿರಿಯ ವಕೀಲ ಮುಕುಲ್ ರೋಹ್ಟಗಿ ಕಚೇರಿಯಿಂದ ದರ್ಶನ್ ಪರ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ಜೈಲು ಸೇರಿದ 8 ತಿಂಗಳ ಬಳಿಕ ಈ ಅರ್ಜಿ ಸಲ್ಲಿಸಿದ್ದು, ಮೇ 4 ಕ್ಕೆ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ. ಜಾಮೀನು ಅರ್ಜಿಯಲ್ಲಿ ಪ್ರಕರಣದ ಟ್ರಯಲ್ ಪ್ರಾರಂಭವಾಗಿದೆ. 8 ತಿಂಗಳು ಕಳೆದ್ರೂ ಕೂಡ ಸಾಕ್ಷಿಗಳ ವಿಚಾರಣೆ ಮುಕ್ತಾಯ ಆಗಿಲ್ಲ. ಸಾಕ್ಷಿಗಳ ವಿಚಾರಣೆ ವಿಳಂಬವಾಗುತ್ತಿದೆ. ಟ್ರಯಲ್ನಲ್ಲಿ ಸಾಕ್ಷಿಗಳ ವಿಚಾರಣೆ ತಡ ಆದರೆ ಮುಕ್ತಾಯ ಆಗಲು ಸಾಕಷ್ಟು ವರ್ಷ ಬೇಕಾಗಲಿದೆ. ಟ್ರಯಲ್ಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತೇನೆ. ಆದ್ದರಿಂದ ಜಾಮೀನು ಮಂಜೂರು ಮಾಡಿ ಎಂದು ಏಪ್ರಿಲ್ 2ನೇ ವಾರದಲ್ಲಿ ಮನವಿ ಮಾಡಿದ್ದಾರೆ.
ಟ್ರಯಲ್ ಪ್ರಾರಂಭವಾಗಿ 8 ತಿಂಗಳಿಗೆ 15 ಸಾಕ್ಷಿಗಳಷ್ಟೇ ವಿಚಾರಣೆಯಾಗಿದೆ. ಪ್ರಕರಣದಲ್ಲಿ 273 ಸಾಕ್ಷ್ಯಗಳು ಇದ್ದಾವೆ. ಟ್ರಯಲ್ ಕೋರ್ಟ್ನಲ್ಲಿ ರೇಣುಕಾಸ್ವಾಮಿ ತಂದೆ – ತಾಯಿ ಹೊರತು ಪಡಿಸಿದರೆ, ಮಹಜರು ಸಾಕ್ಷಿಗಳ ವಿಚಾರಣೆ ಮಾತ್ರ ನಡೆಯುತ್ತಿದೆ. ಆರೋಪಿಗಳು ಟ್ರಯಲ್ ಸಂದರ್ಭದಲ್ಲಿ ಬೇರೆ ಬೇರೆ ಅರ್ಜಿಗಳ ಸಲ್ಲಿಕೆ ಮಾಡಿದ್ದು, ತುಂಬಾ ವಿಳಂಬಕ್ಕೆ ಕಾರಣವಾಗಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.14 ರಂದು ಜಾಮೀನು ರದ್ದು ಮಾಡಿದ್ದ ಸುಪ್ರೀಂ ಕೋರ್ಟ್, ಆರೋಪಿಗಳಿಗೆ ತಕ್ಷಣವೇ ಶರಣಾಗಲು ಸೂಚಿಸಿತ್ತು. ಆದೇಶದ ಬಳಿಕ ಜೈಲು ಸೇರಿದ್ದ ದರ್ಶನ್, ಇದೀಗ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…