ರಾಜ್ಯ

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

ಹಿರಿಯ ವಕೀಲ ಮುಕುಲ್ ರೋಹ್ಟಗಿ ಕಚೇರಿಯಿಂದ ದರ್ಶನ್‌ ಪರ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ಜೈಲು ಸೇರಿದ 8 ತಿಂಗಳ ಬಳಿಕ ಈ ಅರ್ಜಿ ಸಲ್ಲಿಸಿದ್ದು, ಮೇ 4 ಕ್ಕೆ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ. ಜಾಮೀನು ಅರ್ಜಿಯಲ್ಲಿ ಪ್ರಕರಣದ ಟ್ರಯಲ್ ಪ್ರಾರಂಭವಾಗಿದೆ. 8 ತಿಂಗಳು ಕಳೆದ್ರೂ ಕೂಡ ಸಾಕ್ಷಿಗಳ ವಿಚಾರಣೆ ಮುಕ್ತಾಯ ಆಗಿಲ್ಲ. ಸಾಕ್ಷಿಗಳ ವಿಚಾರಣೆ ವಿಳಂಬವಾಗುತ್ತಿದೆ. ಟ್ರಯಲ್‌ನಲ್ಲಿ ಸಾಕ್ಷಿಗಳ ವಿಚಾರಣೆ ತಡ ಆದರೆ ಮುಕ್ತಾಯ ಆಗಲು ಸಾಕಷ್ಟು ವರ್ಷ ಬೇಕಾಗಲಿದೆ. ಟ್ರಯಲ್‌ಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತೇನೆ. ಆದ್ದರಿಂದ ಜಾಮೀನು ಮಂಜೂರು ಮಾಡಿ ಎಂದು ಏಪ್ರಿಲ್ 2ನೇ ವಾರದಲ್ಲಿ ಮನವಿ ಮಾಡಿದ್ದಾರೆ.

ಟ್ರಯಲ್ ಪ್ರಾರಂಭವಾಗಿ 8 ತಿಂಗಳಿಗೆ 15 ಸಾಕ್ಷಿಗಳಷ್ಟೇ ವಿಚಾರಣೆಯಾಗಿದೆ. ಪ್ರಕರಣದಲ್ಲಿ 273 ಸಾಕ್ಷ್ಯಗಳು ಇದ್ದಾವೆ. ಟ್ರಯಲ್ ಕೋರ್ಟ್‌ನಲ್ಲಿ ರೇಣುಕಾಸ್ವಾಮಿ ತಂದೆ – ತಾಯಿ ಹೊರತು ಪಡಿಸಿದರೆ, ಮಹಜರು ಸಾಕ್ಷಿಗಳ ವಿಚಾರಣೆ ಮಾತ್ರ ನಡೆಯುತ್ತಿದೆ. ಆರೋಪಿಗಳು ಟ್ರಯಲ್ ಸಂದರ್ಭದಲ್ಲಿ ಬೇರೆ ಬೇರೆ ಅರ್ಜಿಗಳ ಸಲ್ಲಿಕೆ ಮಾಡಿದ್ದು, ತುಂಬಾ ವಿಳಂಬಕ್ಕೆ ಕಾರಣವಾಗಿದೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.14 ರಂದು ಜಾಮೀನು ರದ್ದು ಮಾಡಿದ್ದ ಸುಪ್ರೀಂ ಕೋರ್ಟ್, ಆರೋಪಿಗಳಿಗೆ ತಕ್ಷಣವೇ ಶರಣಾಗಲು ಸೂಚಿಸಿತ್ತು. ಆದೇಶದ ಬಳಿಕ ಜೈಲು ಸೇರಿದ್ದ ದರ್ಶನ್, ಇದೀಗ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

9 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago