ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ನಟ ದರ್ಶನ್ರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಹಾಗೂ ಎ1 ಆರೋಪಿ ಪವಿತ್ರ ಗೌಡಗೆ ನ್ಯಾಯಂಗ ಬಂಧನ ನೀಡಿ ಕೋರ್ಟ್ ಆದೇಶ ನೀಡಿದೆ.
ದರ್ಶನ್ ಹಾಗೂ ಗ್ಯಾಂಗ್ನ ಪೊಲೀಸ್ ಕಸ್ಟಡಿ ಇಂದು(ಜೂ.20) ಅಂತ್ಯವಾದ ಹಿನ್ನಲೆಯಲ್ಲಿ ಎಲ್ಲಾ ಆರೋಪಿಗಳನ್ನು ಕೋರ್ಟ್ಗೆ ಹಾಜರು ಪಡಿಸಲಾಗಿತ್ತು. ಕೋರ್ಟ್ನಲ್ಲಿ ಹಾಜರಾದ ಆರೋಪಿಗಳನ್ನು ನ್ಯಾಯಾಧೀಶ ವಿಶ್ವನಾಥ್ ಸಿ.ಗೌಡ ಅವರು ವಿಚಾರಣೆ ನಡೆಸಿದರು.
ದರ್ಶನ್ ಸೇರಿದಂತೆ ನಾಲ್ಕು ಮಂದಿಯನ್ನು ಆರೋಪಿಗಳ ವಿಚಾರಣೆ ಅಗತ್ಯವಿರುವುದರಿಂದ ಎರಡು ದಿನ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪ್ರಕರಣದ ಎ1 ಆರೋಪಿ ನಟಿ ಪವಿತ್ರಗೌಡಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುವುದರಿಂದ ಪವಿತ್ರ ಪರಪ್ಪನ ಅಗ್ರಹಾರ ಸೇರಲಿದ್ದಾರೆ.
ಆರೋಪಿಗಳಾದ ವಿನಯ್,ಪ್ರದೋಷ್ಮತ್ತು ಧನರಾಜ್ ಪೊಲೀಸ್ ಕಸ್ಟಡಿಯಲ್ಲಿ ದರ್ಶನ್ನೊಂದಿಗೆ ವಿಚಾರಣೆ ಎದುರಿಸಲಿದ್ದಾರೆ. ಉಳಿದ ಆರೋಪಿಗಳು ಪವಿತ್ರಗೌಡ ಜೊತೆ ಜೈಲು ಪಾಲಾಗಿದ್ದಾರೆ.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…