ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ನಟ ದರ್ಶನ್ರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಹಾಗೂ ಎ1 ಆರೋಪಿ ಪವಿತ್ರ ಗೌಡಗೆ ನ್ಯಾಯಂಗ ಬಂಧನ ನೀಡಿ ಕೋರ್ಟ್ ಆದೇಶ ನೀಡಿದೆ.
ದರ್ಶನ್ ಹಾಗೂ ಗ್ಯಾಂಗ್ನ ಪೊಲೀಸ್ ಕಸ್ಟಡಿ ಇಂದು(ಜೂ.20) ಅಂತ್ಯವಾದ ಹಿನ್ನಲೆಯಲ್ಲಿ ಎಲ್ಲಾ ಆರೋಪಿಗಳನ್ನು ಕೋರ್ಟ್ಗೆ ಹಾಜರು ಪಡಿಸಲಾಗಿತ್ತು. ಕೋರ್ಟ್ನಲ್ಲಿ ಹಾಜರಾದ ಆರೋಪಿಗಳನ್ನು ನ್ಯಾಯಾಧೀಶ ವಿಶ್ವನಾಥ್ ಸಿ.ಗೌಡ ಅವರು ವಿಚಾರಣೆ ನಡೆಸಿದರು.
ದರ್ಶನ್ ಸೇರಿದಂತೆ ನಾಲ್ಕು ಮಂದಿಯನ್ನು ಆರೋಪಿಗಳ ವಿಚಾರಣೆ ಅಗತ್ಯವಿರುವುದರಿಂದ ಎರಡು ದಿನ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪ್ರಕರಣದ ಎ1 ಆರೋಪಿ ನಟಿ ಪವಿತ್ರಗೌಡಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುವುದರಿಂದ ಪವಿತ್ರ ಪರಪ್ಪನ ಅಗ್ರಹಾರ ಸೇರಲಿದ್ದಾರೆ.
ಆರೋಪಿಗಳಾದ ವಿನಯ್,ಪ್ರದೋಷ್ಮತ್ತು ಧನರಾಜ್ ಪೊಲೀಸ್ ಕಸ್ಟಡಿಯಲ್ಲಿ ದರ್ಶನ್ನೊಂದಿಗೆ ವಿಚಾರಣೆ ಎದುರಿಸಲಿದ್ದಾರೆ. ಉಳಿದ ಆರೋಪಿಗಳು ಪವಿತ್ರಗೌಡ ಜೊತೆ ಜೈಲು ಪಾಲಾಗಿದ್ದಾರೆ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…