ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ನಟ ದರ್ಶನ್ರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಹಾಗೂ ಎ1 ಆರೋಪಿ ಪವಿತ್ರ ಗೌಡಗೆ ನ್ಯಾಯಂಗ ಬಂಧನ ನೀಡಿ ಕೋರ್ಟ್ ಆದೇಶ ನೀಡಿದೆ.
ದರ್ಶನ್ ಹಾಗೂ ಗ್ಯಾಂಗ್ನ ಪೊಲೀಸ್ ಕಸ್ಟಡಿ ಇಂದು(ಜೂ.20) ಅಂತ್ಯವಾದ ಹಿನ್ನಲೆಯಲ್ಲಿ ಎಲ್ಲಾ ಆರೋಪಿಗಳನ್ನು ಕೋರ್ಟ್ಗೆ ಹಾಜರು ಪಡಿಸಲಾಗಿತ್ತು. ಕೋರ್ಟ್ನಲ್ಲಿ ಹಾಜರಾದ ಆರೋಪಿಗಳನ್ನು ನ್ಯಾಯಾಧೀಶ ವಿಶ್ವನಾಥ್ ಸಿ.ಗೌಡ ಅವರು ವಿಚಾರಣೆ ನಡೆಸಿದರು.
ದರ್ಶನ್ ಸೇರಿದಂತೆ ನಾಲ್ಕು ಮಂದಿಯನ್ನು ಆರೋಪಿಗಳ ವಿಚಾರಣೆ ಅಗತ್ಯವಿರುವುದರಿಂದ ಎರಡು ದಿನ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪ್ರಕರಣದ ಎ1 ಆರೋಪಿ ನಟಿ ಪವಿತ್ರಗೌಡಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುವುದರಿಂದ ಪವಿತ್ರ ಪರಪ್ಪನ ಅಗ್ರಹಾರ ಸೇರಲಿದ್ದಾರೆ.
ಆರೋಪಿಗಳಾದ ವಿನಯ್,ಪ್ರದೋಷ್ಮತ್ತು ಧನರಾಜ್ ಪೊಲೀಸ್ ಕಸ್ಟಡಿಯಲ್ಲಿ ದರ್ಶನ್ನೊಂದಿಗೆ ವಿಚಾರಣೆ ಎದುರಿಸಲಿದ್ದಾರೆ. ಉಳಿದ ಆರೋಪಿಗಳು ಪವಿತ್ರಗೌಡ ಜೊತೆ ಜೈಲು ಪಾಲಾಗಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…