ರಾಜ್ಯ

ಜೈಲಿನಲ್ಲಿ ನಟ ದರ್ಶನ್‌ಗೆ 40 ನಿಮಿಷ ವಾಕ್‌ ಮಾಡಲು ಅವಕಾಶ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ 40 ನಿಮಿಷ ವಾಕ್‌ ಮಾಡಲು ಅವಕಾಶ ನೀಡಲಾಗಿದೆ.

ಬೆಳಿಗ್ಗೆ ಮತ್ತು ಸಂಜೆ 40 ನಿಮಿಷ ವಾಕಿಂಗ್‌ ಮಾಡಲು ಅವಕಾಶ ನೀಡಲಾಗಿದ್ದು, ಬ್ಯಾರಕ್‌ನ ಹೊರಭಾಗದ ಕಾರಿಡಾರ್‌ನಲ್ಲಿ ವಾಕ್‌ ಮಾಡಲು ಅನುಮತಿ ಸಿಕ್ಕಿದೆ.

ಈ ಸಂದರ್ಭದಲ್ಲಿ ಬೇರೆ ವಿಚಾರಣಾಧೀನ ಕೈದಿಗಳಿಗೆ ವಾಕ್‌ ಮಾಡಲು ಅವಕಾಶ ಇರುವುದಿಲ್ಲ. ಸುಪ್ರೀಂಕೋರ್ಟ್‌ ಎಚ್ಚರಿಕೆ ಬಳಿಕ ನಟ ದರ್ಶನ್‌ ಸುತ್ತಾಮುತ್ತಾ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳ ಹಿಂದೆ ನಟ ದರ್ಶನ್‌ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ನಟ ದರ್ಶನ್‌ ನ್ಯಾಯಾಧೀಶರ ಮುಂದೆ ಜೈಲಿನಲ್ಲಿ ನಿತ್ಯ ನರಕ ದರ್ಶನ ಆಗುತ್ತಿದೆ. ಒಂದು ಮನವಿ ಇದೆ. ಬಿಸಿಲು ನೋಡಿ ಒಂದು ತಿಂಗಳಾಯಿತು. ದಯವಿಟ್ಟು ನನಗೆ ಸ್ವಲ್ಪ ವಿಷ ಕೊಡಿ ಎಂದು ಮನವಿ ಮಾಡಿದ್ದರು.

ಬಳಿಕ ಮಧ್ಯಾಹ್ನದ ವೇಳೆಗೆ ಬೆಂಗಳೂರಿನ 57ನೇ ಸಿಸಿಎಚ್‌ ನ್ಯಾಯಾಲಯವು ನಟ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡದಂತೆ ಆದೇಶ ಹೊರಡಿಸಿ, ಪರಪ್ಪನ ಅಗ್ರಹಾರ ಜೈಲಿನೊಳಗೆ ನಟ ದರ್ಶನ್‌ ಓಡಾಡಬಹುದು ಎಂದು ಹೇಳಿತ್ತು.

ಜೊತೆಗೆ ನಟ ದರ್ಶನ್‌ಗೆ ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡಲು ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಈಗ ದರ್ಶನ್‌ ಕೊಂಚ ನಿರಾಳರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

27 mins ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

33 mins ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

37 mins ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

43 mins ago

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…

48 mins ago