ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೋಮವಾರ ನಡೆದಿದ್ದು, ದರ್ಶನ್ ಪರ ವಕೀಲರು ಬಲವಾದ ವಾದ ಮಂಡಿಸಿ ಪೊಲೀಸರು ವೈಫಲ್ಯಗಳನ್ನು ತೋರಿಸಿದ್ದಾರೆ. ಹೀಗಾಗಿ, ಎಸ್ಪಿಪಿ ಪ್ರಸನ್ನಕುಮಾರ್ ಪ್ರತಿವಾದಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನಾಳೆಗೆ(ಅ.9) 57ನೇ ಸಿಸಿಎಚ್ ನ್ಯಾಯಾಲಯ ಮುಂದೂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೆಲ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು ಮುಗಿಸಿದ ನಂತರ ಆರೋಪಿ ಎ2 ದರ್ಶನ್ ಹಾಗೂ ಎ1 ಪವಿತ್ರಾ ಅವರ ವಕೀಲರು ಪ್ರಕರಣದ ತನಿಖೆಗೆ ಬಗ್ಗೆ ಕೇಳಿದ ಕೆಲವು ಪ್ರಶ್ನೆಗಳಿಗೆ ಎಸ್ಪಿಪಿ ಅವರು ಉತ್ತರ ನೀಡಲು ಪ್ರಾರಂಭಿಸಿದರು.
ಎಸ್ಪಿಪಿ ಅವರ ಸುದೀರ್ಘ ವಾದ ಮಂಡನೆಯ ಸಂದರ್ಭದಲ್ಲಿ ನ್ಯಾಯಾಲಯದ ಸಮಯ ಮೀರಿದ ಕಾರಣ ಹಾಗೂ ಆರೋಪಿಗಳ ಪರ ವಕೀಲರು ಕೇಳಿರುವ ಇನ್ನುಳಿದ ಪ್ರಶ್ನೆಗಳಿಗೆ ಉತ್ತರಿಸಲು ಇನ್ನಷ್ಟು ಸಮಯ ಬೇಕಾಗಿರುವುದರಿಂದ ಎಸ್ಪಿಪಿ ಪ್ರಸನ್ನಕುಮಾರ್ ಅವರ ಮನವಿಯ ಮೇರೆಗೆ ನಾಳೆ(ಅ.9) ಮಧ್ಯಾಹ್ನ 12.30ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ಕೋರ್ಟ್ ತಿಳಿಸಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…