ಬೆಂಗಳೂರು: ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬುವವರ ಅಪಹರಣ ಹಾಗೂ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಈ ಭೀಕರ ಕೊಲೆಗೆ ದರ್ಶನ್ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ನಿನ್ನೆ ತಾನೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ತಮ್ಮ ಇನ್ಸ್ಟಾ ಖಾತೆಯಲ್ಲಿ ಪತಿ ದರ್ಶನ್ನನ್ನು ಅನ್ಫಾಲೋ ಮಾಡಿ, ಡಿಪಿ ಕೂಡ ಬದಲಾಯಿಸಿದ್ದರು.
ವಿಜಯಲಕ್ಷ್ಮೀ ಕೂಡ ಪ್ರಕರಣ ಸಂಬಂಧ ಈವರೆಗೂ ಯಾವುದೇ ಕಾಮೆಂಟ್ ಮಾಡಿಲ್ಲ. ಆದರೆ ಇತ್ತ, ದರ್ಶನ್ ಹಾಗೂ ವಿಜಯಲಕ್ಷ್ಮೀ ಅವರ ಪುತ್ರ ವಿನೀಶ್ ಸೋಶಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಸದ್ಯ ಈ ಪೋಸ್ಟ್ ಎಲ್ಲರ ಗಮನ ಸೆಳೆದಿದೆ.
ತಂದೆ ದರ್ಶನ್ ಅರೆಸ್ಟ್ಗೆ ಪುತ್ರ ವಿನೀಶ್ ದರ್ಶನ್ ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ , ಸೋಶಿಯಲ್ ಮೀಡಿಯಾದ ಒತ್ತಡ ಹಾಗೂ ಕೆಟ್ಟ ಕಾಮೆಂಟ್ಗಳ ಬಗ್ಗೆ ಬರೆದುಕೊಂಡಿದ್ದಾರೆ.
ನನ್ನ ತಂದೆ ಬಗ್ಗೆ ಕೆಟ್ಟ ಕಾಮೆಂಟ್ಸ್ ಮತ್ತು ಅಸಭ್ಯ ಭಾಷೆಯಲ್ಲಿ ನಿಂದನೆ ಮಾಡುತ್ತಿರುವವರಿಗೆ ಧನ್ಯವಾದಗಳು. ನನಗೆ 15 ವರ್ಷ, ನನಗೂ ಮನಸಿದೆ. ಇಂತಹ ಕಷ್ಟದ ಸಮಯದಲ್ಲಿ ನನ್ನ ತಾಯಿ ಮತ್ತು ತಂದೆಗೆ ನಿಮ್ಮ ಬೆಂಬಲದ ಅಗತ್ಯವಿದೆ. ನನಗೆ ಶಾಪ ಹಾಕಿದ್ರೆ ಬದಲಾವಣೆ ಆಗೋದಿಲ್ಲ. ನೀವು ಹಾಕಿರುವ ಶಾಪವನ್ನು ಬದಲಿಸಲು ಸಾಧ್ಯವಿಲ್ಲ, ಎಲ್ಲರಿಗೂ ಥ್ಯಾಂಕ್ಸ್ ಎಂದು ವಿನೀಶ್ ಬರೆದುಕೊಂಡಿದ್ದಾರೆ.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…