ರಾಜ್ಯ

ನಟ ದರ್ಶನ್ ಪ್ರಕರಣ: ನಿರ್ದೇಶಕ ಇಂದ್ರಜೀತ್‌ ಲಂಕೇಶ್‌ ಹೇಳಿದ್ದೇನು?

ಹುಬ್ಬಳ್ಳಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಾಗಿದ್ರು ಕಠಿಣ ಶಿಕ್ಷೆಯಾಗಲೀ, ಇಡೀ ಚಿತ್ರರಂಗ ಕೊಲೆಯನ್ನು ಖಂಡಿಸುತ್ತದೆ ಎಂದು ನಟ, ನಿರ್ದೇಶಕ ಇಂದ್ರಜೀತ್‌ ಲಂಕೇಶ್‌ ಹೇಳಿದ್ದಾರೆ.

ಈ ಕುರಿತು ಇಂದು(ಜೂ.13) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆ ಪ್ರಕರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲೆ ಆರೋಪಿ ಯಾರೆಂದು ತನಿಖೆಯಿಂದ ಗೊತ್ತಾಗಲಿದೆ. ನಂತರ ಕುಟುಂಬದ ಪರವಾಗಿ ನಾನು ನ್ಯಾಯ ಕೊಡಿಸಲು ಪ್ರತಿಭಟನೆ ಮಾಡುತ್ತೇನೆ ಎಂದರು.

ನನ್ನ ಅಕ್ಕ ಗೌರಿ ಕೊಲೆಗೆ ಇನ್ನೂ ನ್ಯಾಯ ಸಿಕ್ಕಿಲ್ಲ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅವರು ಕುಟುಂಬದವರಿಗೂ ಅನ್ಯಾಯವಾಗಿದೆ. ರೇಣುಕಾಸ್ವಾಮಿ ಹೆಂಡತಿಗೆ ನ್ಯಾಯ ಕೊಡಿಸುವ ಕೆಲಸವಾಗಲಿ ಎಂದು ಒತ್ತಾಯಿಸಿದ ಅವರು ಅವರ ಪತ್ನಿ ಐದು ತಿಂಗಳ ಗರ್ಭಿಣಯಾಗಿದ್ದಾರೆ. ಅವರನ್ನು ಭೇಟಿಯಾಗಿ ಸಾಂತ್ವ ಹೇಳುತ್ತೇನೆ ಎಂದರು.

ಇಂತಹ ಪ್ರಕರಣದಲ್ಲಿ ನಟ, ರಾಜಕಾರಣಿ ಯಾರೇ ಭಾಗಿಯಾದರೂ ಅವರಿಗೆ ರಾಜಮರ್ಯಾದೆ ನೀಡಬಾರದು. ಮಾಧ್ಯಮದವರು ಇಡೀ ಪ್ರಕರಣದ ವಾಸ್ತವತೆ ವರದಿ ಮಾಡಿದ್ದರಿಂದ ರೇಣುಕಾಸ್ವಾಮಿ ಪ್ರಕರಣ ಗಂಭೀರತೆ ಪಡೆದುಕೊಂಡಿದೆ. ಇಲ್ಲದಿದ್ದರೆ ಪ್ರಕರಣ ಕೈತಪ್ಪುತ್ತಿತ್ತು ಎಂದು ಹೇಳಿದರು.

ಇನ್ನೂ ಸಾಮಾಜಿಕ ಜಾಲತಾಣಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಇಂದ್ರಜೀತ್‌ ಲಂಕೇಶ್‌, ಸಾಮಾಜಿಕ ಜಾಲತಾಣಗಳ ಮೂಲಕ ಕೆಲವರು ದ್ವೇಷ ಹರಡಿ, ತೇಜೋವಧೆ ಮಾಡುತ್ತಿದ್ದಾರೆ. ಸರ್ಕಾರ ಇದರ ಬಗ್ಗೆ ಗಂಭೀರ ಚಿಂತನೆ ನಡೆಸಬೇಕು. ಸೈಬರ್‌ ಪೊಲೀಸರು ಕೂಡ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದಕ್ಕೂ ಮುನ್ನ ಶಿವಮೊಗ್ಗದಲ್ಲಿ ದರ್ಶನ್‌ ಪ್ರಕರಣಕ್ಕೆ ಪ್ರತಿಕ್ರಿಯಿಸಿ,  ಕೊಲೆ ಪ್ರಕರಣ ಕುರಿತು ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ ಎಂದ ಅವರು “ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ. ನೆರೆಯವರ ದುಖಃಕ್ಕೆ ಅಳುವವರ ಮೆಚ್ಚ ಕೂಡಲಸಂಗಮದೇವ” ಎಂದು ಬಸವಣ್ಣನವರ ವಚನ ಹೇಳುವ ಮೂಲಕ ಮಾರ್ಮಿಕವಾಗಿ ಉತ್ತರಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

4 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

4 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

6 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

6 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

6 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

14 hours ago