ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಜೈಲಿಗೆ ಹಾಸಿಗೆ, ಮನೆಯೂಟ ಹಾಗೂ ಕೆಲವು ಬೇಡಿಕೆಯನ್ನು ಪೂರೈಸುವಂತೆ ಹೈಕೋರ್ಟ್ಗೆ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.
ಜೈಲಿನ ಊಟದಲ್ಲಿ ವಾಂತಿ ಭೇದಿಯಾಗುತ್ತಿದೆ, ಮನೆಯಿಂದ ಊಟ, ಹಾಸಿಗೆ ಹಾಗೂ ಕೆಲವು ಪುಸ್ತಕಗಳನು ತರಿಸಲು ಅವಕಾಶ ಮಾಡಿಕೊಡಿ ಎಂದು ನಟ ದರ್ಶನ್ ನಿನ್ನೆ(ಜು.9)ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದರು. ಅರ್ಜಿಯನ್ನು ಇಂದು(ಜು.10) ವಿಚಾರಣೆ ನಡೆಸಿದ ನ್ಯಾ.ಎಸ್ ಆರ್ ಕೃಷ್ಣಕುಮಾರ್ ಅವರಿದ್ದ ಪೀಠ ವಿಚಾರಣೆಯನ್ನು ಜುಲೈ 18 ಕ್ಕೆ ಮುಂದೂಡಿ ಆದೇಶಿಸಿದೆ.
ನಟ ದರ್ಶನ್ ಪರ ವಾದ ಮಂಡಿಸಿದ ವಕೀಲ ಕೆ.ಎನ್ ಫಣೀಂದ್ರ ಜೈಲು ನಿಯಾಮವಳಿಗಳಲ್ಲಿ ಮನೆ ಊಟಕ್ಕೆ ಅವಕಾಶವಿದೆ. ಆದರೆ ದರ್ಶನ್ಗೆ ಅವಕಾಶ ನೀಡಿಲ್ಲ ಎಂದರು.
ಮನೆಯಿಂದ ಊಟ, ಹಾಸಿಗೆ ಹಾಗೂ ಪುಸ್ತಕ ಕೋರಿದ್ದೀರಿ. ಜೈಲು ಕೈಪಿಡಿಯಲ್ಲಿ ಮನೆ ಊಟದ ಬಗ್ಗೆ ನಿಯಮವಿದೆಯೇ, ಹಾಗೆಯೇ ಈ ಬಗ್ಗೆ ಹಿಂದೆ ಕೋರ್ಟ್ ತೀರ್ಪುಗಳಿವೆಯೇ. ನೀವು ಏನಾದರೂ ಜೈಲು ಅಧಿಕಾರಿಗಳನ್ನು ಮನವಿ ಮಾಡಿದ್ದೀರಾ? ಎಂದು ಪ್ರಶ್ನಿಸಿದ ನ್ಯಾಯಮೂರ್ತಿ ಎಸ್. ಆರ್ ಕೃಷ್ಣಕುಮಾರ್ ಅವರು ಕಾನೂನು ಅನುಸಾರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜೈಲು ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಜುಲೈ 18 ಕ್ಕೆ ಮೂಂದೂಡಿ ಆದೇಶಿಸಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…