ರಾಜ್ಯ

ನಟ ದರ್ಶನ್‌ಗೆ ಮತ್ತೆ ನಿರಾಸೆ: ಕೆಲ ಸೌಲಭ್ಯ ಕುರಿತ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ ಜೈಲಿನಲ್ಲಿ ದಿಂಬು, ಹಾಸಿಗೆ ಸೇರಿದಂತೆ ಕೆಲ ಸೌಲಭ್ಯ ಕಲ್ಪಿಸುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೋರ್ಟ್‌ ಸೆಪ್ಟೆಂಬರ್.‌25ಕ್ಕೆ ಮುಂದೂಡಿಕೆ ಮಾಡಿದೆ.

ಜೈಲಿನಲ್ಲಿ ತನಗೆ ಹಾಸಿಗೆ, ದಿಂಬು ಒದಗಿಸುವಂತೆ ಈ ಹಿಂದೆ ನಟ ದರ್ಶನ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ್ದ ನ್ಯಾಯಾಲಯ ದರ್ಶನ್‌ಗೆ ಹಾಸಿಗೆ, ತಲೆದಿಂಬು ನೀಡುವಂತೆ ಆದೇಶ ನೀಡಿತ್ತು.

ಇದನ್ನೂ ಓದಿ: Mysuru dasara | ಸೆ.22ರಂದು ರಾಜ್ಯ ಮಟ್ಟದ ದಸರಾ ಸಿ.ಎಂ ಕಪ್ ಕ್ರೀಡಾಕೂಟ ಉದ್ಘಾಟನೆ

ಆದರೆ ಕೋರ್ಟ್‌ ಆದೇಶ ನೀಡಿದರೂ ಜೈಲಾಧಿಕಾರಿಗಳು ಮಾತ್ರ ಈವರೆಗೂ ದರ್ಶನ್‌ಗೆ ಯಾವುದೇ ಹಾಸಿಗೆ, ತಲೆದಿಂಬು ಮೊದಲಾದ ವ್ಯವಸ್ಥೆ ಮಾಡಿರಲಿಲ್ಲ.

ಇದರಿಂದ ತೀವ್ರ ತೊಂದರೆ ಅನುಭವಿಸುತ್ತಿರುವ ನಟ ದರ್ಶನ್‌ ಮತ್ತೆ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಜೈಲಾಧಿಕಾರಿಗಳು ಕೋರ್ಟ್‌ ಆದೇಶ ಪಾಲನೆ ಮಾಡಿಲ್ಲ ಎಂದು ದೂರು ನೀಡಿದ್ದರು.

ದರ್ಶನ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್‌ ಕೋರ್ಟ್‌, ವಾದ-ಪ್ರತಿವಾದ ಆಲಿಸಿದ್ದು, ಅರ್ಜಿ ಕುರಿತ ಆದೇಶವನ್ನು ಸೆಪ್ಟೆಂಬರ್.‌19ಕ್ಕೆ ನಿಗದಿ ಮಾಡಿತ್ತು. ಇಂದು ವಿಚಾರಣೆ ಕೈಗೆತ್ತಿಕೊಂಡಿದ್ದ

ಆಂದೋಲನ ಡೆಸ್ಕ್

Recent Posts

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ಜೈಶಂಕರ್‌ಗೆ ಮನವಿ

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…

1 hour ago

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ 17 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…

2 hours ago

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…

2 hours ago

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

2 hours ago

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

2 hours ago

ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ…

2 hours ago