ರಾಜ್ಯ

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ ಪ್ರಕರಣಕ್ಕೆ ಹೊಸದಾಗಿ ಎನ್‌ಸಿಆರ್‌ ದಾಖಲಾಗಿ ಮತ್ತೊಂದು ಸಂಕಷ್ಟ ಎದುರಾಗಿದೆ.

ನಟ ದರ್ಶನ್‌ 2022ರಲ್ಲಿ ಯುವ ನಿರ್ಮಾಪಕ ಭರತ್‌ ಅವರಿಗೆ ಕರೆ ಮೂಲಕ ಬೆದರಿಕೆ ಹಾಕಿದ್ದರು ಎಂಬ ಆರೋಪದ ಮೇಲೆ ಕೆಂಗೇರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರ ಬಗ್ಗೆ ಭರತ್‌ ಅವರು ಮಾಧ್ಯಮಗಳ ಮುಂದೆ ಕರೆ ಮಾಹಿತಿ ಹಾಗೂ ಕಾಲ್‌ ರೆಕಾರ್ಡ್‌ಗಳನ್ನು ಬಿಡುಗಡೆ ಮಾಡಿದ್ದರು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಧ್ರುವನ್‌, ನಟ ದರ್ಶನ್‌ ಹಾಗೂ ದರ್ಶನ್‌ ಅವರ ಮ್ಯಾನೇಜರ್‌ ನಾಗರಾಜು ಮೇಲೆ ಹೊಸದಾಗಿ ಎನ್‌ಸಿಆರ್‌ ದಾಖಲಾಗಿದೆ. ಹೀಗಾಗಿ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆ.

ನಟ ದರ್ಶನ್‌ ಯಾಕೆ ಬೆದರಿಕೆ ಹಾಕಿದ್ದರು?
ನಿರ್ಮಾಪಕ ಭರತ್‌ “ಶ್ರೀ ಕೃಷ್ಣಾʼ ಎಂಬ ನೂತನ ಸಿನಿಮಾವನ್ನು ಪ್ರಾರಂಭಿಸಿದ್ದರು. ಈ ಚಿತ್ರಕ್ಕೆ ನಾಯಕ ನಟನಾಗಿ ಧ್ರುವನ್‌ ಅವರನ್ನು ಆಯ್ಕೆ ಮಾಡೊಕೊಂಡಿದ್ದರು. ಆದರೆ, ಕೋವಿಡ್‌ ಬಂದ ವಿಚಾರವಾಗಿ ಸಿನಿಮಾ ಚಿತ್ರೀಕರಣ ಕೊನೆಗೊಂಡಿತ್ತು. ನಂತರ ಧ್ರುವನ್‌ , ದರ್ಶನ್‌ ಅವರ ಹತ್ತಿರ ಹೋಗಿ ಚಿತ್ರೀಕರಣ ಪ್ರಾರಂಭಿಸುವಂತೆ ಭರತ್‌ ಅವರಿಗೆ ಕರೆ ಮಾಡಿಸಿದ್ದರು. ಆ ಕರೆಯಲ್ಲಿ ಪ್ರಾರಂಭದಲ್ಲಿ ಕೂಲ್‌ ಆಗಿಯೇ ದರ್ಶನ್‌ ಮಾತನಾಡಿ, ಧ್ರುವನ್‌ ನಿಮ್ಮನ್ನೆ ನಂಬಿದ್ದಾನೆ, ಸಿನಿಮಾ ನಿಲ್ಲಿಸಬೇಡಿ ಎಂದು ಮನವಿ ಮಾಡಿದ್ದರು. ಬಳಿಕ ಚಿತ್ರೀಕರಣಕ್ಕೆ ಒಪ್ಪದೆ ಇದ್ದಾಗ ಸಿನಿಮಾ ಮುಗಿಸದೇ ಇದ್ದರೆ, ಭೂಮಿ ಮೇಲೆ ನಿನ್ನನ್ನು ಇಲ್ಲದಂತೆ ಮಾಡಿ ಬಿಡುತ್ತೇನೆ ಎಂದು ಕೆಲವು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆಯ ಮಾತುಗಳನ್ನು ಹಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

12 mins ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

48 mins ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

58 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

1 hour ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

4 hours ago