ರಾಜ್ಯ

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ ಪ್ರಕರಣಕ್ಕೆ ಹೊಸದಾಗಿ ಎನ್‌ಸಿಆರ್‌ ದಾಖಲಾಗಿ ಮತ್ತೊಂದು ಸಂಕಷ್ಟ ಎದುರಾಗಿದೆ.

ನಟ ದರ್ಶನ್‌ 2022ರಲ್ಲಿ ಯುವ ನಿರ್ಮಾಪಕ ಭರತ್‌ ಅವರಿಗೆ ಕರೆ ಮೂಲಕ ಬೆದರಿಕೆ ಹಾಕಿದ್ದರು ಎಂಬ ಆರೋಪದ ಮೇಲೆ ಕೆಂಗೇರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರ ಬಗ್ಗೆ ಭರತ್‌ ಅವರು ಮಾಧ್ಯಮಗಳ ಮುಂದೆ ಕರೆ ಮಾಹಿತಿ ಹಾಗೂ ಕಾಲ್‌ ರೆಕಾರ್ಡ್‌ಗಳನ್ನು ಬಿಡುಗಡೆ ಮಾಡಿದ್ದರು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಧ್ರುವನ್‌, ನಟ ದರ್ಶನ್‌ ಹಾಗೂ ದರ್ಶನ್‌ ಅವರ ಮ್ಯಾನೇಜರ್‌ ನಾಗರಾಜು ಮೇಲೆ ಹೊಸದಾಗಿ ಎನ್‌ಸಿಆರ್‌ ದಾಖಲಾಗಿದೆ. ಹೀಗಾಗಿ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆ.

ನಟ ದರ್ಶನ್‌ ಯಾಕೆ ಬೆದರಿಕೆ ಹಾಕಿದ್ದರು?
ನಿರ್ಮಾಪಕ ಭರತ್‌ “ಶ್ರೀ ಕೃಷ್ಣಾʼ ಎಂಬ ನೂತನ ಸಿನಿಮಾವನ್ನು ಪ್ರಾರಂಭಿಸಿದ್ದರು. ಈ ಚಿತ್ರಕ್ಕೆ ನಾಯಕ ನಟನಾಗಿ ಧ್ರುವನ್‌ ಅವರನ್ನು ಆಯ್ಕೆ ಮಾಡೊಕೊಂಡಿದ್ದರು. ಆದರೆ, ಕೋವಿಡ್‌ ಬಂದ ವಿಚಾರವಾಗಿ ಸಿನಿಮಾ ಚಿತ್ರೀಕರಣ ಕೊನೆಗೊಂಡಿತ್ತು. ನಂತರ ಧ್ರುವನ್‌ , ದರ್ಶನ್‌ ಅವರ ಹತ್ತಿರ ಹೋಗಿ ಚಿತ್ರೀಕರಣ ಪ್ರಾರಂಭಿಸುವಂತೆ ಭರತ್‌ ಅವರಿಗೆ ಕರೆ ಮಾಡಿಸಿದ್ದರು. ಆ ಕರೆಯಲ್ಲಿ ಪ್ರಾರಂಭದಲ್ಲಿ ಕೂಲ್‌ ಆಗಿಯೇ ದರ್ಶನ್‌ ಮಾತನಾಡಿ, ಧ್ರುವನ್‌ ನಿಮ್ಮನ್ನೆ ನಂಬಿದ್ದಾನೆ, ಸಿನಿಮಾ ನಿಲ್ಲಿಸಬೇಡಿ ಎಂದು ಮನವಿ ಮಾಡಿದ್ದರು. ಬಳಿಕ ಚಿತ್ರೀಕರಣಕ್ಕೆ ಒಪ್ಪದೆ ಇದ್ದಾಗ ಸಿನಿಮಾ ಮುಗಿಸದೇ ಇದ್ದರೆ, ಭೂಮಿ ಮೇಲೆ ನಿನ್ನನ್ನು ಇಲ್ಲದಂತೆ ಮಾಡಿ ಬಿಡುತ್ತೇನೆ ಎಂದು ಕೆಲವು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆಯ ಮಾತುಗಳನ್ನು ಹಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಲಗಿದ್ದ ವೇಳೆ ಹೃದಯಾಘಾತ: ಆರೋಗ್ಯ ಇಲಾಖೆ ನೌಕರ ಸಾವು

ಹಾಸನ: ಹೃದಯಾಘಾತದಿಂದ ಆರೋಗ್ಯ ಇಲಾಖೆ ನೌಕರ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವಾನಂದ್‌ ಎಂಬುವವರೇ ಮೃತಪಟ್ಟ…

9 mins ago

ಉಡುತೊರೆ ಹಳ್ಳ ಜಲಾಶಯ ಕಾಮಗಾರಿಗೆ ಸಿಎಂ ಅನುಮೋದನೆ: ಮಲೆ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯ ಏತ ನೀರಾವರಿ ಯೋಜನೆ ಹಾಗೂ…

34 mins ago

ಮತ್ತೆ ಇರಾನ್‌ನ ನಾಲ್ಕು ತೈಲ ಘಟಕಗಳನ್ನು ಉಡೀಸ್‌ ಮಾಡಿದ ಅಮೇರಿಕಾ

ಟೆಹರಾನ್:‌ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್‌ನ ಬೀದಿ ಬೀದಿಗಳಲ್ಲಿ ಬೆಂಕಿ…

52 mins ago

ಸ್ಯಾಂಡಲ್‌ವುಡ್‌ ಖ್ಯಾತ ನಿರ್ಮಾಪಕ ನರಹಳ್ಳಿ ಜ್ಞಾನೇಶ್‌ ನಿಧನ

ಪಾಂಡವಪುರ: ಸ್ಯಾಂಡಲ್‌ವುಡ್‌ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ…

1 hour ago

ಜೆಡಿಯುಗೆ ಸೇರ್ಪಡೆಯಾದ ಬಿಹಾರ ಸಿಎಂ ನಿತೀಶ್‌ ಪುತ್ರ ನಿಶಾಂತ್ ಕುಮಾರ್‌

ಪಾಟ್ನಾ: ಬಿಹಾರ ಸಿಎಂ ನಿತೀಶ್‌ ಕುಮಾರ್‌ ಪುತ್ರ ನಿಶಾಂತ್‌ ಕುಮಾರ್‌ ಅವರಿಂದು ಪಾಟ್ನಾದ ಜೆಡಿಯು ಪಕ್ಷದ ಪ್ರಧಾನ ಕಚೇರಿಯಲ್ಲಿ ಜೆಡಿಯು…

1 hour ago

ಇರಾನ್-‌ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಇರಾನ್‌ ಮೇಲೆ ಇಸ್ರೇಲ್‌, ಅಮೇರಿಕಾ ದಾಳಿ ನಡೆಸುತ್ತಿರುವ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಅದರ ಬಿಸಿ ರಾಜಧಾನಿ ಬೆಂಗಳೂರಿಗೆ…

2 hours ago