ಬೆಂಗಳೂರು: ನಟ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ ಪ್ರಕರಣಕ್ಕೆ ಹೊಸದಾಗಿ ಎನ್ಸಿಆರ್ ದಾಖಲಾಗಿ ಮತ್ತೊಂದು ಸಂಕಷ್ಟ ಎದುರಾಗಿದೆ.
ನಟ ದರ್ಶನ್ 2022ರಲ್ಲಿ ಯುವ ನಿರ್ಮಾಪಕ ಭರತ್ ಅವರಿಗೆ ಕರೆ ಮೂಲಕ ಬೆದರಿಕೆ ಹಾಕಿದ್ದರು ಎಂಬ ಆರೋಪದ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರ ಬಗ್ಗೆ ಭರತ್ ಅವರು ಮಾಧ್ಯಮಗಳ ಮುಂದೆ ಕರೆ ಮಾಹಿತಿ ಹಾಗೂ ಕಾಲ್ ರೆಕಾರ್ಡ್ಗಳನ್ನು ಬಿಡುಗಡೆ ಮಾಡಿದ್ದರು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಧ್ರುವನ್, ನಟ ದರ್ಶನ್ ಹಾಗೂ ದರ್ಶನ್ ಅವರ ಮ್ಯಾನೇಜರ್ ನಾಗರಾಜು ಮೇಲೆ ಹೊಸದಾಗಿ ಎನ್ಸಿಆರ್ ದಾಖಲಾಗಿದೆ. ಹೀಗಾಗಿ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆ.
ನಟ ದರ್ಶನ್ ಯಾಕೆ ಬೆದರಿಕೆ ಹಾಕಿದ್ದರು?
ನಿರ್ಮಾಪಕ ಭರತ್ “ಶ್ರೀ ಕೃಷ್ಣಾʼ ಎಂಬ ನೂತನ ಸಿನಿಮಾವನ್ನು ಪ್ರಾರಂಭಿಸಿದ್ದರು. ಈ ಚಿತ್ರಕ್ಕೆ ನಾಯಕ ನಟನಾಗಿ ಧ್ರುವನ್ ಅವರನ್ನು ಆಯ್ಕೆ ಮಾಡೊಕೊಂಡಿದ್ದರು. ಆದರೆ, ಕೋವಿಡ್ ಬಂದ ವಿಚಾರವಾಗಿ ಸಿನಿಮಾ ಚಿತ್ರೀಕರಣ ಕೊನೆಗೊಂಡಿತ್ತು. ನಂತರ ಧ್ರುವನ್ , ದರ್ಶನ್ ಅವರ ಹತ್ತಿರ ಹೋಗಿ ಚಿತ್ರೀಕರಣ ಪ್ರಾರಂಭಿಸುವಂತೆ ಭರತ್ ಅವರಿಗೆ ಕರೆ ಮಾಡಿಸಿದ್ದರು. ಆ ಕರೆಯಲ್ಲಿ ಪ್ರಾರಂಭದಲ್ಲಿ ಕೂಲ್ ಆಗಿಯೇ ದರ್ಶನ್ ಮಾತನಾಡಿ, ಧ್ರುವನ್ ನಿಮ್ಮನ್ನೆ ನಂಬಿದ್ದಾನೆ, ಸಿನಿಮಾ ನಿಲ್ಲಿಸಬೇಡಿ ಎಂದು ಮನವಿ ಮಾಡಿದ್ದರು. ಬಳಿಕ ಚಿತ್ರೀಕರಣಕ್ಕೆ ಒಪ್ಪದೆ ಇದ್ದಾಗ ಸಿನಿಮಾ ಮುಗಿಸದೇ ಇದ್ದರೆ, ಭೂಮಿ ಮೇಲೆ ನಿನ್ನನ್ನು ಇಲ್ಲದಂತೆ ಮಾಡಿ ಬಿಡುತ್ತೇನೆ ಎಂದು ಕೆಲವು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆಯ ಮಾತುಗಳನ್ನು ಹಾಡಿದ್ದಾರೆ.
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…
ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…