ಬೆಂಗಳೂರು: ನಟ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ ಪ್ರಕರಣಕ್ಕೆ ಹೊಸದಾಗಿ ಎನ್ಸಿಆರ್ ದಾಖಲಾಗಿ ಮತ್ತೊಂದು ಸಂಕಷ್ಟ ಎದುರಾಗಿದೆ.
ನಟ ದರ್ಶನ್ 2022ರಲ್ಲಿ ಯುವ ನಿರ್ಮಾಪಕ ಭರತ್ ಅವರಿಗೆ ಕರೆ ಮೂಲಕ ಬೆದರಿಕೆ ಹಾಕಿದ್ದರು ಎಂಬ ಆರೋಪದ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರ ಬಗ್ಗೆ ಭರತ್ ಅವರು ಮಾಧ್ಯಮಗಳ ಮುಂದೆ ಕರೆ ಮಾಹಿತಿ ಹಾಗೂ ಕಾಲ್ ರೆಕಾರ್ಡ್ಗಳನ್ನು ಬಿಡುಗಡೆ ಮಾಡಿದ್ದರು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಧ್ರುವನ್, ನಟ ದರ್ಶನ್ ಹಾಗೂ ದರ್ಶನ್ ಅವರ ಮ್ಯಾನೇಜರ್ ನಾಗರಾಜು ಮೇಲೆ ಹೊಸದಾಗಿ ಎನ್ಸಿಆರ್ ದಾಖಲಾಗಿದೆ. ಹೀಗಾಗಿ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆ.
ನಟ ದರ್ಶನ್ ಯಾಕೆ ಬೆದರಿಕೆ ಹಾಕಿದ್ದರು?
ನಿರ್ಮಾಪಕ ಭರತ್ “ಶ್ರೀ ಕೃಷ್ಣಾʼ ಎಂಬ ನೂತನ ಸಿನಿಮಾವನ್ನು ಪ್ರಾರಂಭಿಸಿದ್ದರು. ಈ ಚಿತ್ರಕ್ಕೆ ನಾಯಕ ನಟನಾಗಿ ಧ್ರುವನ್ ಅವರನ್ನು ಆಯ್ಕೆ ಮಾಡೊಕೊಂಡಿದ್ದರು. ಆದರೆ, ಕೋವಿಡ್ ಬಂದ ವಿಚಾರವಾಗಿ ಸಿನಿಮಾ ಚಿತ್ರೀಕರಣ ಕೊನೆಗೊಂಡಿತ್ತು. ನಂತರ ಧ್ರುವನ್ , ದರ್ಶನ್ ಅವರ ಹತ್ತಿರ ಹೋಗಿ ಚಿತ್ರೀಕರಣ ಪ್ರಾರಂಭಿಸುವಂತೆ ಭರತ್ ಅವರಿಗೆ ಕರೆ ಮಾಡಿಸಿದ್ದರು. ಆ ಕರೆಯಲ್ಲಿ ಪ್ರಾರಂಭದಲ್ಲಿ ಕೂಲ್ ಆಗಿಯೇ ದರ್ಶನ್ ಮಾತನಾಡಿ, ಧ್ರುವನ್ ನಿಮ್ಮನ್ನೆ ನಂಬಿದ್ದಾನೆ, ಸಿನಿಮಾ ನಿಲ್ಲಿಸಬೇಡಿ ಎಂದು ಮನವಿ ಮಾಡಿದ್ದರು. ಬಳಿಕ ಚಿತ್ರೀಕರಣಕ್ಕೆ ಒಪ್ಪದೆ ಇದ್ದಾಗ ಸಿನಿಮಾ ಮುಗಿಸದೇ ಇದ್ದರೆ, ಭೂಮಿ ಮೇಲೆ ನಿನ್ನನ್ನು ಇಲ್ಲದಂತೆ ಮಾಡಿ ಬಿಡುತ್ತೇನೆ ಎಂದು ಕೆಲವು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆಯ ಮಾತುಗಳನ್ನು ಹಾಡಿದ್ದಾರೆ.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್ಸರ : ಪಂಜಾಬ್ನ ಅಮೃತ್ಸರ್ ಮತ್ತು ಜಲಂಧರ್ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…