ಬೆಂಗಳೂರು: ನಟ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ ಪ್ರಕರಣಕ್ಕೆ ಹೊಸದಾಗಿ ಎನ್ಸಿಆರ್ ದಾಖಲಾಗಿ ಮತ್ತೊಂದು ಸಂಕಷ್ಟ ಎದುರಾಗಿದೆ.
ನಟ ದರ್ಶನ್ 2022ರಲ್ಲಿ ಯುವ ನಿರ್ಮಾಪಕ ಭರತ್ ಅವರಿಗೆ ಕರೆ ಮೂಲಕ ಬೆದರಿಕೆ ಹಾಕಿದ್ದರು ಎಂಬ ಆರೋಪದ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರ ಬಗ್ಗೆ ಭರತ್ ಅವರು ಮಾಧ್ಯಮಗಳ ಮುಂದೆ ಕರೆ ಮಾಹಿತಿ ಹಾಗೂ ಕಾಲ್ ರೆಕಾರ್ಡ್ಗಳನ್ನು ಬಿಡುಗಡೆ ಮಾಡಿದ್ದರು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಧ್ರುವನ್, ನಟ ದರ್ಶನ್ ಹಾಗೂ ದರ್ಶನ್ ಅವರ ಮ್ಯಾನೇಜರ್ ನಾಗರಾಜು ಮೇಲೆ ಹೊಸದಾಗಿ ಎನ್ಸಿಆರ್ ದಾಖಲಾಗಿದೆ. ಹೀಗಾಗಿ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆ.
ನಟ ದರ್ಶನ್ ಯಾಕೆ ಬೆದರಿಕೆ ಹಾಕಿದ್ದರು?
ನಿರ್ಮಾಪಕ ಭರತ್ “ಶ್ರೀ ಕೃಷ್ಣಾʼ ಎಂಬ ನೂತನ ಸಿನಿಮಾವನ್ನು ಪ್ರಾರಂಭಿಸಿದ್ದರು. ಈ ಚಿತ್ರಕ್ಕೆ ನಾಯಕ ನಟನಾಗಿ ಧ್ರುವನ್ ಅವರನ್ನು ಆಯ್ಕೆ ಮಾಡೊಕೊಂಡಿದ್ದರು. ಆದರೆ, ಕೋವಿಡ್ ಬಂದ ವಿಚಾರವಾಗಿ ಸಿನಿಮಾ ಚಿತ್ರೀಕರಣ ಕೊನೆಗೊಂಡಿತ್ತು. ನಂತರ ಧ್ರುವನ್ , ದರ್ಶನ್ ಅವರ ಹತ್ತಿರ ಹೋಗಿ ಚಿತ್ರೀಕರಣ ಪ್ರಾರಂಭಿಸುವಂತೆ ಭರತ್ ಅವರಿಗೆ ಕರೆ ಮಾಡಿಸಿದ್ದರು. ಆ ಕರೆಯಲ್ಲಿ ಪ್ರಾರಂಭದಲ್ಲಿ ಕೂಲ್ ಆಗಿಯೇ ದರ್ಶನ್ ಮಾತನಾಡಿ, ಧ್ರುವನ್ ನಿಮ್ಮನ್ನೆ ನಂಬಿದ್ದಾನೆ, ಸಿನಿಮಾ ನಿಲ್ಲಿಸಬೇಡಿ ಎಂದು ಮನವಿ ಮಾಡಿದ್ದರು. ಬಳಿಕ ಚಿತ್ರೀಕರಣಕ್ಕೆ ಒಪ್ಪದೆ ಇದ್ದಾಗ ಸಿನಿಮಾ ಮುಗಿಸದೇ ಇದ್ದರೆ, ಭೂಮಿ ಮೇಲೆ ನಿನ್ನನ್ನು ಇಲ್ಲದಂತೆ ಮಾಡಿ ಬಿಡುತ್ತೇನೆ ಎಂದು ಕೆಲವು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆಯ ಮಾತುಗಳನ್ನು ಹಾಡಿದ್ದಾರೆ.
ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…