ಬೆಂಗಳೂರು: ನಟ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ ಪ್ರಕರಣಕ್ಕೆ ಹೊಸದಾಗಿ ಎನ್ಸಿಆರ್ ದಾಖಲಾಗಿ ಮತ್ತೊಂದು ಸಂಕಷ್ಟ ಎದುರಾಗಿದೆ.
ನಟ ದರ್ಶನ್ 2022ರಲ್ಲಿ ಯುವ ನಿರ್ಮಾಪಕ ಭರತ್ ಅವರಿಗೆ ಕರೆ ಮೂಲಕ ಬೆದರಿಕೆ ಹಾಕಿದ್ದರು ಎಂಬ ಆರೋಪದ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರ ಬಗ್ಗೆ ಭರತ್ ಅವರು ಮಾಧ್ಯಮಗಳ ಮುಂದೆ ಕರೆ ಮಾಹಿತಿ ಹಾಗೂ ಕಾಲ್ ರೆಕಾರ್ಡ್ಗಳನ್ನು ಬಿಡುಗಡೆ ಮಾಡಿದ್ದರು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಧ್ರುವನ್, ನಟ ದರ್ಶನ್ ಹಾಗೂ ದರ್ಶನ್ ಅವರ ಮ್ಯಾನೇಜರ್ ನಾಗರಾಜು ಮೇಲೆ ಹೊಸದಾಗಿ ಎನ್ಸಿಆರ್ ದಾಖಲಾಗಿದೆ. ಹೀಗಾಗಿ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆ.
ನಟ ದರ್ಶನ್ ಯಾಕೆ ಬೆದರಿಕೆ ಹಾಕಿದ್ದರು?
ನಿರ್ಮಾಪಕ ಭರತ್ “ಶ್ರೀ ಕೃಷ್ಣಾʼ ಎಂಬ ನೂತನ ಸಿನಿಮಾವನ್ನು ಪ್ರಾರಂಭಿಸಿದ್ದರು. ಈ ಚಿತ್ರಕ್ಕೆ ನಾಯಕ ನಟನಾಗಿ ಧ್ರುವನ್ ಅವರನ್ನು ಆಯ್ಕೆ ಮಾಡೊಕೊಂಡಿದ್ದರು. ಆದರೆ, ಕೋವಿಡ್ ಬಂದ ವಿಚಾರವಾಗಿ ಸಿನಿಮಾ ಚಿತ್ರೀಕರಣ ಕೊನೆಗೊಂಡಿತ್ತು. ನಂತರ ಧ್ರುವನ್ , ದರ್ಶನ್ ಅವರ ಹತ್ತಿರ ಹೋಗಿ ಚಿತ್ರೀಕರಣ ಪ್ರಾರಂಭಿಸುವಂತೆ ಭರತ್ ಅವರಿಗೆ ಕರೆ ಮಾಡಿಸಿದ್ದರು. ಆ ಕರೆಯಲ್ಲಿ ಪ್ರಾರಂಭದಲ್ಲಿ ಕೂಲ್ ಆಗಿಯೇ ದರ್ಶನ್ ಮಾತನಾಡಿ, ಧ್ರುವನ್ ನಿಮ್ಮನ್ನೆ ನಂಬಿದ್ದಾನೆ, ಸಿನಿಮಾ ನಿಲ್ಲಿಸಬೇಡಿ ಎಂದು ಮನವಿ ಮಾಡಿದ್ದರು. ಬಳಿಕ ಚಿತ್ರೀಕರಣಕ್ಕೆ ಒಪ್ಪದೆ ಇದ್ದಾಗ ಸಿನಿಮಾ ಮುಗಿಸದೇ ಇದ್ದರೆ, ಭೂಮಿ ಮೇಲೆ ನಿನ್ನನ್ನು ಇಲ್ಲದಂತೆ ಮಾಡಿ ಬಿಡುತ್ತೇನೆ ಎಂದು ಕೆಲವು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆಯ ಮಾತುಗಳನ್ನು ಹಾಡಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…