ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ಗೆ ಕೋರ್ಟ್ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ. ಜುಲೈ.18ರವರೆಗೆ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿಯಾಗಿರುವ ನಟ ದರ್ಶನ್ ಹಾಗೂ ಇತರೆ ಕೊಲೆ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ಗೆ ಹಾಜರಾಗಿದ್ದರು. ಬೆಂಗಳೂರು ಮತ್ತು ತುಮಕೂರು ಜೈಲಿನಿಂದ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಎ1 ಆರೋಪಿ ಪವಿತ್ರಾಗೌಡ ಪ್ರತ್ಯೇಕವಾಗಿ ಕೋರ್ಟ್ಗೆ ಹಾಜರಾಗಿದ್ದರು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ಜುಲೈ.18ರವರೆಗೆ ದರ್ಶನ್ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅಂದರೆ ಇನ್ನೂ 14 ದಿನಗಳ ಕಾಲ ದರ್ಶನ್ ಜೈಲಿನಲ್ಲಿಯೇ ಇರಬೇಕಾಗಿದೆ.
ನಟ ದರ್ಶನ್ ಗೆಳತಿ ನಟಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆ ತಂದು ಹತ್ಯೆ ಮಾಡಲಾಗಿತ್ತು.
ರಾಜರಾಜೇಶ್ವರಿಯಲ್ಲಿರುವ ದರ್ಶನ್ ಮನೆಯಿಂದ ತುಸು ದೂರವೇ ಇರುವ ಶೆಡ್ನಲ್ಲಿಟ್ಟು ಚಿತ್ರಹಿಂಸೆ ನೀಡಲಾಗಿತ್ತು. ದರ್ಶನ್ ಅಂಡ್ ಗ್ಯಾಂಗ್ ರೇಣುಕಾಸ್ವಾಮಿಯನ್ನು ಮನಬಂದಂತೆ ಹಲ್ಲೆ ಮಾಡಿ, ಕರೆಂಟ್ ಶಾಕ್ ಕೊಟ್ಟು, ಕಬ್ಬಿಣದ ಸರಳಿನಿಂದ ಹೊಡೆದು, ಮರ್ಮಾಂಗಕ್ಕೆ ಒದ್ದು ಹಲ್ಲೆ ಮಾಡಿದ್ದಾಗಿ ಆರೋಪಿಗಳು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ದರ್ಶನ್ ಎ2 ಆರೋಪಿಯಾಗಿದ್ದು, ಪವಿತ್ರಾಗೌಡ ಎ1 ಆರೋಪಿ ಆಗಿದ್ದಾರೆ. ಇದೀಗ ಮತ್ತೆ ಡಿ ಗ್ಯಾಂಗ್ಗೆ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ.
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…