ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ಗೆ ಕೋರ್ಟ್ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ. ಜುಲೈ.18ರವರೆಗೆ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿಯಾಗಿರುವ ನಟ ದರ್ಶನ್ ಹಾಗೂ ಇತರೆ ಕೊಲೆ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ಗೆ ಹಾಜರಾಗಿದ್ದರು. ಬೆಂಗಳೂರು ಮತ್ತು ತುಮಕೂರು ಜೈಲಿನಿಂದ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಎ1 ಆರೋಪಿ ಪವಿತ್ರಾಗೌಡ ಪ್ರತ್ಯೇಕವಾಗಿ ಕೋರ್ಟ್ಗೆ ಹಾಜರಾಗಿದ್ದರು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ಜುಲೈ.18ರವರೆಗೆ ದರ್ಶನ್ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅಂದರೆ ಇನ್ನೂ 14 ದಿನಗಳ ಕಾಲ ದರ್ಶನ್ ಜೈಲಿನಲ್ಲಿಯೇ ಇರಬೇಕಾಗಿದೆ.
ನಟ ದರ್ಶನ್ ಗೆಳತಿ ನಟಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆ ತಂದು ಹತ್ಯೆ ಮಾಡಲಾಗಿತ್ತು.
ರಾಜರಾಜೇಶ್ವರಿಯಲ್ಲಿರುವ ದರ್ಶನ್ ಮನೆಯಿಂದ ತುಸು ದೂರವೇ ಇರುವ ಶೆಡ್ನಲ್ಲಿಟ್ಟು ಚಿತ್ರಹಿಂಸೆ ನೀಡಲಾಗಿತ್ತು. ದರ್ಶನ್ ಅಂಡ್ ಗ್ಯಾಂಗ್ ರೇಣುಕಾಸ್ವಾಮಿಯನ್ನು ಮನಬಂದಂತೆ ಹಲ್ಲೆ ಮಾಡಿ, ಕರೆಂಟ್ ಶಾಕ್ ಕೊಟ್ಟು, ಕಬ್ಬಿಣದ ಸರಳಿನಿಂದ ಹೊಡೆದು, ಮರ್ಮಾಂಗಕ್ಕೆ ಒದ್ದು ಹಲ್ಲೆ ಮಾಡಿದ್ದಾಗಿ ಆರೋಪಿಗಳು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ದರ್ಶನ್ ಎ2 ಆರೋಪಿಯಾಗಿದ್ದು, ಪವಿತ್ರಾಗೌಡ ಎ1 ಆರೋಪಿ ಆಗಿದ್ದಾರೆ. ಇದೀಗ ಮತ್ತೆ ಡಿ ಗ್ಯಾಂಗ್ಗೆ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…