ಹೊಸಪೇಟೆ: ಶನಿವಾರ ಎರಡನೇ ದಿನ ಹಂಪಿ ಉತ್ಸವದ ಉದ್ಘಾಟನೆ ಕಾರ್ಯಕ್ರಮಕ್ಕೆ ಸಿನಿಮಾ ನಾಯಕ ನಟ ದರ್ಶನ್ ತೂಗುದೀಪ ಮೆರಗು ತಂದರು. ದರ್ಶನ್ ನೋಡಿದ ಜನಸ್ತೋಮ ‘ಡಿ ಬಾಸ್’ ಎಂದು ಕೂಗಿ ಸಂತಸ ವ್ಯಕ್ತಪಡಿಸಿದರು.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಜಯನಗರ ಜಿಲ್ಲಾ ಉಸ್ತುವಾರಿ ವಹಿಸಿಕೊಂಡು ಹಂಪಿ ಉತ್ಸವ ಆಯೋಜಿಸುವ ಸದಾವಕಾಶ ದೊರಕಿದೆ. ಇದರಿಂದ ಸಂತೋಷ ಹಾಗೂ ಖುಷಿ ಆಗುತ್ತಿದೆ ಎಂದರು.
ಸಿನಿಮಾ ನಾಯಕ ನಟ ದರ್ಶನ ಮಾತನಾಡಿ, 2018 ರಲ್ಲಿ ಹಂಪಿ ಉತ್ಸವಕ್ಕೆ ಆಗಮಿಸಿದ್ದೆ. 2024 ರಲ್ಲಿ ಮೊತ್ತೊಮ್ಮೆ ಆಗಮಿಸಿರುವುದು ಸುದೈವ. ಕನ್ನಡ ನಾಡಿನ ಚರಿತ್ರೆಯಲ್ಲಿ ಕೃಷ್ಣ ದೇವರಾಯ, ಸಂಗೊಳ್ಳಿ ರಾಯಣ್ಣ ಹಾಗೂ ಮದಕರಿ ನಾಯಕರ ಹೆಸರು ಎಂದಿಗೂ ಚಿರಸ್ಥಾಯಿಯಾಗಿದೆ.
ಕೃಷ್ಣದೇವರಾಯರು ನಮ್ಮೆಲ್ಲರಿಗೂ ಪ್ರೇರಣೆ. ಅವರ ಕಾರಣದಿಂದಲೇ ಇಂದು ನಾವೆಲ್ಲರೂ ಹಂಪಿಯಲ್ಲಿ ಉತ್ಸವ ಆಚರಿಸುತ್ತಿದ್ದೇವೆ. ಕೃಷ್ಣದೇವರಾಯರ ಆತ್ಮ ನಮ್ಮೆಲ್ಲರೊಂದಿಗಿದೆ ಎಂದರು.
ಸಚಿವ ಜಮೀರ್ ಅಹ್ಮದ್ ಒಳ್ಳೆಯ ವ್ಯಕ್ತಿ, ಯಾವುದೇ ಫಲಾಪೇಕ್ಷೆ ಇಲ್ಲದೆ ಬಡವರಿಗೆ ನೆರವು ನೀಡಿದ್ದಾರೆ. ಬಡ ಮಕ್ಕಳ ಶಿಕ್ಷಣ ಸಹಾಯ ಒದಗಿಸಿದ್ದಾರೆ. ಅವರ ಮೇಲಿನ ಅಭಿಮಾನದಿಂದ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ.
ಮೈಸೂರಿನ ದಸರಾ ಮಾದರಿಯಲ್ಲಿ ಹಂಪಿ ಉತ್ಸವವು ಜನ ಮನ ಸೂರೆಗೊಂಡಿದೆ. ಇದೇ ಮಾದರಿಯಲ್ಲಿ ಉತ್ತರ ಕರ್ನಾಟಕ ಭಾಗದ ಉತ್ಸವಗಳು ಪ್ರಸಿದ್ಧಿ ಗಳಿಸಲಿ ಎಂದರು.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…