ಬೆಂಗಳೂರು: ನಟ ದರ್ಶನ್ರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, 8 ರಿಂದ 10 ಜನ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಅವರನ್ನು ಶಿಫ್ಟ್ ಮಾಡಲಾಗಿದೆ. ಯಾರನ್ನು ಯಾವ ಜೈಲಿಗೆ ಶಿಫ್ಟ್ ಮಾಡಬೇಕೆಂಬುದನ್ನು ಪೊಲೀಸರೇ ನಿರ್ಧಾರ ಮಾಡಿದ್ದಾರೆ ಎಂದರು.
ಇನ್ನು ದರ್ಶನ್ ಸ್ಥಳಾಂತರ ಮಾಡಿರುವುದು ಅಧಿಕಾರಿಗಳ ತೀರ್ಮಾನವಾಗಿದೆ. ಘಟನೆ ಬಳಿಕ ಪೊಲೀಸರೇ ಈ ಬಗ್ಗೆ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದರು.
ಇನ್ನು ನಟ ದರ್ಶನ್ ಅವರು ಬಳ್ಳಾರಿ ಜೈಲಿಗೆ ಹೋದ ಬಳಿಕವೇ ಬೇಸರ ವ್ಯಕ್ತಪಡಿಸಿದ್ದು, ನನಗೆ ಜೈಲಿನ ಊಟ ಬೇಡ ಎಂದು ಅಸಮಾಧಾನ ಹೊರಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಳ್ಳಾರಿ ಜೈಲಿನ ಸೆಲ್ ನೋಡುತ್ತಿದ್ದಂತೆ ತಲೆ ಚಚ್ಚಿಕೊಂಡ ದರ್ಶನ್, ಭಾರೀ ಬೇಸರದಿಂದ ಸೆಲ್ ಒಳಗಡೆ ತೆರಳಿದರು ಎಂದು ಹೇಳಲಾಗುತ್ತಿದೆ.
ಕೋಲ್ಕತ್ತಾ : ಟಿ20 ವಿಶ್ವಕಪ್ನ ಸೂಪರ್ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…
ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…
ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…
ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…
ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…
ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…