ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ , ಪವಿತ್ರಾ ಗೌಡ ಸೇರಿ ಇತರ ಆರೋಪಿಗಳು ಈಗಾಗಲೇ ಜೈಲು ಪಾಲಾಗಿದ್ದಾರೆ. ಪ್ರಕರಣದ ತನಿಖೆಯನ್ನು ಪೊಲೀಸರು ಸಹ ಚುರುಕುಗೊಳಿಸಿದ್ದು, ದರ್ಶನ್ ವಿರುದ್ಧ ೩೦ಕ್ಕೂ ಹೆಚ್ಚು ಸಾಕ್ಷ್ಯಗಳು ಸಿಕ್ಕಿವೆ ಎಂದು ವರದಿ ಕೂಡ ಆಗಿದೆ.
ನಟ ದರ್ಶನ್ ಪರಪ್ಪನ ಅಗ್ರಹಾರದ ಜೈಲು ಸೇರುತ್ತಿದ್ದಂತೆ ಪ್ರತಿದಿನವೂ ಕೂಡ ಅಭಿಮಾನಿಗಳು ಜೈಲಿನ ಬಳಿ ಬಂದು ದರ್ಶನ್ ನೋಡಬೇಕು ಬಿಡಿ ಎಂದು ಪೊಲೀಸರ ಬಳಿ ಮನವಿ ಮಾಡುತ್ತಿದ್ದಾರೆ. ಮಹಿಳೆಯರು, ವಿಶೇಷ ಚೇತನರು ಸೇರಿದಂತೆ ಇತರ ಅಭಿಮಾನಿಗಳು ಜೈಲಿನ ಬಳಿ ಬಂದು ಬೀಡುಬಿಟ್ಟಿದ್ದು, ಇದೀಗ ಈ ವಿಚಾರವಾಗಿ ನಟ ದರ್ಶನ್ ಅವರೇ ತಮ್ಮ ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ್ದಾರೆ.
ಜೈಲಾಧಿಕಾರಿಗಳ ಮೂಲಕ ಮನವಿ ಮಾಡಿರುವ ದರ್ಶನ್ , ʻಯಾರೂ ಕೂಡ ಜೈಲಿನ ಬಳಿ ಬರಬೇಡಿ , ಜೈಲಿನ ಬಳಿ ಬಂದು ನನ್ನ ಭೇಟಿಗೆ ಕಾಯುವುದು, ನನ್ನನ್ನ ಭೇಟಿ ಮಾಡಲು ಸಾಧ್ಯವಾಗದೆ ನಿರಾಸೆಯಿಂದ ವಾಪಸ್ ಹೋಗುವುದು ಬೇಡ. ದಯಮಾಡಿ ಯಾರು ಜೈಲಿನ ಬಳಿ ಬಂದು ಸಮಯ ವ್ಯರ್ಥ ಮಾಡಿಕೊಳ್ಳಬೇಡಿʼ ಎಂದು ಕೋರಿದ್ದಾರೆ.
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…