ರಾಜ್ಯ

ನಟ ದರ್ಶನ್‌ ಅರ್ಜಿ ವಿಚಾರಣೆ: ಅಕ್ಟೋಬರ್.‌9ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಇತರೆ ಸೌಲಭ್ಯ ನೀಡದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆದಿದೆ.

57ನೇ ಸಿವಿಲ್‌ ಕೋರ್ಟ್‌ ವಿಚಾರಣೆ ನಡೆಸಿದ್ದು, ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಅರ್ಜಿ ವಿಚಾರಣೆಯ ಆದೇಶವನ್ನು ಅಕ್ಟೋಬರ್.‌9ಕ್ಕೆ ಕಾಯ್ದಿರಿಸಿದೆ.

ಇದನ್ನು ಓದಿ : ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಹಣ ಕಳುವು ಪ್ರಕರಣ: ಹಣದ ಮೂಲದ ಬಗ್ಗೆ ಮಾಹಿತಿ ಕೇಳಿದ ಪೊಲೀಸರು

ಕೋರ್ಟ್‌ ಆದೇಶದ ಹೊರತಾಗಿಯೂ ದರ್ಶನ್‌ಗೆ ಯಾವುದೇ ಸವಲತ್ತುಗಳನ್ನು ಜೈಲಾಧಿಕಾರಿಗಳು ನೀಡಿಲ್ಲ. ಈ ಮೂಲಕ ಕೋರ್ಟ್‌ ಆದೇಶ ಉಲ್ಲಂಘನೆಯಾಗಿದೆ ಎಂದು ದರ್ಶನ್‌ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.

ಜೈಲಿನ ನಿಯಮದ ಪ್ರಕಾರ ನಡೆದುಕೊಳ್ಳಲಾಗಿದೆ ಎಂದು ಸರ್ಕಾರಿ ವಕೀಲರು ವಾದ ಮಂಡಿಸಿದ್ದಾರೆ. ಈ ವೇಲೆ ದರ್ಶನ್‌ ಪರ ವಕೀಲ ಸುನಿಲ್‌, ಕೋರ್ಟ್‌ ಆದೇಶ ನೀಡಿದರೂ ದರ್ಶನ್‌ಗೆ ಯಾವುದೇ ಸವಲತ್ತು ನೀಡುತ್ತಿಲ್ಲ.

ದರ್ಶನ್‌ ಬೆನ್ನುನೋವಿನಿಂದ ಬಳಲುತ್ತಿದ್ದರೂ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಯಾವುದೇ ಸೌಲಭ್ಯ ನೀಡಿಲ್ಲ. ಇಡೀ ದೇಶದಲ್ಲಿಯೇ ಪಾಲನೆಯಾಗದಿರುವ ನಿಯಮ ದರ್ಶನ್‌ಗೆ ಅನ್ವಯವಾಗಿದೆ. ಕೋರ್ಟ್‌ ಆದೇಶವನ್ನು ಕೂಡ ಪಾಲಿಸದಿರುವುದು ನೋವುಂಟು ಮಾಡಿದೆ ಎಂದು ವಾದ ಮಂಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

2 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

2 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

2 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

4 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

5 hours ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

6 hours ago