ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ಗೆ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಇತರೆ ಸೌಲಭ್ಯ ನೀಡದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆದಿದೆ.
57ನೇ ಸಿವಿಲ್ ಕೋರ್ಟ್ ವಿಚಾರಣೆ ನಡೆಸಿದ್ದು, ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಅರ್ಜಿ ವಿಚಾರಣೆಯ ಆದೇಶವನ್ನು ಅಕ್ಟೋಬರ್.9ಕ್ಕೆ ಕಾಯ್ದಿರಿಸಿದೆ.
ಇದನ್ನು ಓದಿ : ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಹಣ ಕಳುವು ಪ್ರಕರಣ: ಹಣದ ಮೂಲದ ಬಗ್ಗೆ ಮಾಹಿತಿ ಕೇಳಿದ ಪೊಲೀಸರು
ಕೋರ್ಟ್ ಆದೇಶದ ಹೊರತಾಗಿಯೂ ದರ್ಶನ್ಗೆ ಯಾವುದೇ ಸವಲತ್ತುಗಳನ್ನು ಜೈಲಾಧಿಕಾರಿಗಳು ನೀಡಿಲ್ಲ. ಈ ಮೂಲಕ ಕೋರ್ಟ್ ಆದೇಶ ಉಲ್ಲಂಘನೆಯಾಗಿದೆ ಎಂದು ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.
ಜೈಲಿನ ನಿಯಮದ ಪ್ರಕಾರ ನಡೆದುಕೊಳ್ಳಲಾಗಿದೆ ಎಂದು ಸರ್ಕಾರಿ ವಕೀಲರು ವಾದ ಮಂಡಿಸಿದ್ದಾರೆ. ಈ ವೇಲೆ ದರ್ಶನ್ ಪರ ವಕೀಲ ಸುನಿಲ್, ಕೋರ್ಟ್ ಆದೇಶ ನೀಡಿದರೂ ದರ್ಶನ್ಗೆ ಯಾವುದೇ ಸವಲತ್ತು ನೀಡುತ್ತಿಲ್ಲ.
ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದರೂ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಯಾವುದೇ ಸೌಲಭ್ಯ ನೀಡಿಲ್ಲ. ಇಡೀ ದೇಶದಲ್ಲಿಯೇ ಪಾಲನೆಯಾಗದಿರುವ ನಿಯಮ ದರ್ಶನ್ಗೆ ಅನ್ವಯವಾಗಿದೆ. ಕೋರ್ಟ್ ಆದೇಶವನ್ನು ಕೂಡ ಪಾಲಿಸದಿರುವುದು ನೋವುಂಟು ಮಾಡಿದೆ ಎಂದು ವಾದ ಮಂಡಿಸಿದ್ದಾರೆ.
ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…
ಮೈಸೂರು: ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್ ಎಚ್.ವಿಶ್ವನಾಥ್…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್ ಅವರ ಟಿವಿಕೆ ಪಕ್ಷ…
ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್ ಸಿಂಧೂರಕ್ಕೆ ಒಂದು ವರ್ಷವಾಗಿದೆ.…
ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…