ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ಗೆ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಇತರೆ ಸೌಲಭ್ಯ ನೀಡದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆದಿದೆ.
57ನೇ ಸಿವಿಲ್ ಕೋರ್ಟ್ ವಿಚಾರಣೆ ನಡೆಸಿದ್ದು, ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಅರ್ಜಿ ವಿಚಾರಣೆಯ ಆದೇಶವನ್ನು ಅಕ್ಟೋಬರ್.9ಕ್ಕೆ ಕಾಯ್ದಿರಿಸಿದೆ.
ಇದನ್ನು ಓದಿ : ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಹಣ ಕಳುವು ಪ್ರಕರಣ: ಹಣದ ಮೂಲದ ಬಗ್ಗೆ ಮಾಹಿತಿ ಕೇಳಿದ ಪೊಲೀಸರು
ಕೋರ್ಟ್ ಆದೇಶದ ಹೊರತಾಗಿಯೂ ದರ್ಶನ್ಗೆ ಯಾವುದೇ ಸವಲತ್ತುಗಳನ್ನು ಜೈಲಾಧಿಕಾರಿಗಳು ನೀಡಿಲ್ಲ. ಈ ಮೂಲಕ ಕೋರ್ಟ್ ಆದೇಶ ಉಲ್ಲಂಘನೆಯಾಗಿದೆ ಎಂದು ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.
ಜೈಲಿನ ನಿಯಮದ ಪ್ರಕಾರ ನಡೆದುಕೊಳ್ಳಲಾಗಿದೆ ಎಂದು ಸರ್ಕಾರಿ ವಕೀಲರು ವಾದ ಮಂಡಿಸಿದ್ದಾರೆ. ಈ ವೇಲೆ ದರ್ಶನ್ ಪರ ವಕೀಲ ಸುನಿಲ್, ಕೋರ್ಟ್ ಆದೇಶ ನೀಡಿದರೂ ದರ್ಶನ್ಗೆ ಯಾವುದೇ ಸವಲತ್ತು ನೀಡುತ್ತಿಲ್ಲ.
ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದರೂ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಯಾವುದೇ ಸೌಲಭ್ಯ ನೀಡಿಲ್ಲ. ಇಡೀ ದೇಶದಲ್ಲಿಯೇ ಪಾಲನೆಯಾಗದಿರುವ ನಿಯಮ ದರ್ಶನ್ಗೆ ಅನ್ವಯವಾಗಿದೆ. ಕೋರ್ಟ್ ಆದೇಶವನ್ನು ಕೂಡ ಪಾಲಿಸದಿರುವುದು ನೋವುಂಟು ಮಾಡಿದೆ ಎಂದು ವಾದ ಮಂಡಿಸಿದ್ದಾರೆ.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…