ರಾಜ್ಯ

ನಟ ದರ್ಶನ್‌ ಅರ್ಜಿ ವಿಚಾರಣೆ : ಸೆ.19ಕ್ಕೆ ತೀರ್ಪು

ಬೆಂಗಳೂರು : ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಚಿತ್ರನಟ ದರ್ಶನ್ ಗೆ ಕನಿಷ್ಠ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಕೋರಿ ಸಲ್ಲಿಸಲಾಗಿರುವ ಮೇಲ್ಮನವಿ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ನ್ಯಾಯಾಲಯ ಸೆಪ್ಟೆಂಬರ್ 19 ರಂದು ಆದೇಶವನ್ನು ನೀಡಲಿದೆ.

ತಮಗೆ ಜೈಲಿನಲ್ಲಿ ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಕೋರಿ ದರ್ಶನ್ ಪರ ವಕೀಲರು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಮೇಲ್ಮನೆ ಅರ್ಜಿ ಸಲ್ಲಿಸಿದ್ದರು. ಬುದುವಾರ ಅರ್ಜಿ ವಿಚಾರ ನಡೆಸಿದ ನ್ಯಾಯಾಲಯ ಎರಡು ಕಡೆ ವಾದ -ಪ್ರತಿವಾದವನ್ನು ಆಲಿಸಿ ಅಂತಿಮ ಆದೇಶವನ್ನು ಸೆಪ್ಟೆಂಬರ್ 19ಕ್ಕೆ ಕಾಯ್ದಿರಿತಿದೆ.

ತಮಗೆ ಜೈಲಿನಲ್ಲಿ ಹಾಸಿಗೆ ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯಗಳನ್ನು ನೀಡಬೇಕೆಂದು ದರ್ಶನ್ ಅರ್ಜಿಯಲ್ಲಿ ಕೋರಿದ್ದಾರೆ. ಆದರೆ ಇದಕ್ಕೆ ಸರ್ಕಾರಿ ಪರ ವಕೀಲರು ವಿರೋಧ ವ್ಯಕ್ತಪಡಿಸಿ ಜೈಲಿನ ನಿಯಮಗಳ ಪ್ರಕಾರವೇ ಆರೋಪಿಗೆ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಸಮರ್ಥನೆ ಮಾಡಿಕೊಂಡಿದೆ. ಜೈಲಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದ ಅರ್ಜಿಯನ್ನು ಸಲ್ಲಿಸಿದ್ದಾರೆ. ಕೋರ್ಟ್‌ನ ಆದೇಶದ ನಂತರವೂ ಸೂಕ್ತ ಸೌಲಭ್ಯಗಳನ್ನು ಒದಗಿಸದಿರುವುದಕ್ಕೆ ದರ್ಶನ್ ಬೇಸರ ವ್ಯಕ್ತಪಡಿಸಿದ್ದಾರೆ.

ಕಳೆದ ಒಂದು ತಿಂಗಳಿಂದ ಜೈಲಿನ ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಲಾಗಿರುವ ದರ್ಶನ್, ಕನಿಷ್ಠ ಸೌಲಭ್ಯಗಳ ಕೊರತೆಯಿಂದ ಕಷ್ಟ ಅನುಭವಿಸುತ್ತಿದ್ದಾರೆ. ಕೋರ್ಟ್‌ನ ಆದೇಶದಂತೆ ಜೈಲಾಧಿಕಾರಿಗಳು ಜಮ್ಖಾನ, ದಿಂಬು ಮತ್ತು ವಾಕಿಂಗ್‌ಗೆ ಅವಕಾಶ ನೀಡಿದ್ದಾರೆ. ಆದರೆ, ದರ್ಶನ್‌ಗೆ ಹಾಸಿಗೆ ಒದಗಿಸಿಲ್ಲ ಎಂದು ಆರೋಪಿಸಲಾಗಿದೆ. ಈ ಕಾರಣಕ್ಕಾಗಿ ಅವರು ಮತ್ತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಪರ ವಕೀಲ ಸುನೀಲ್ ಕುಮಾರ್, ಜೈಲಿನಲ್ಲಿ 14 ದಿನಗಳಿಗಿಂತ ಹೆಚ್ಚು ಕಾಲ ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಿರುವುದು ಜೈಲು ನಿಯಮಾವಳಿಗಳ ಉಲ್ಲಂಘನೆ ಎಂದು ವಾದಿಸಿದ್ದಾರೆ. ದರ್ಶನ್ ತಮ್ಮ ಅರ್ಜಿಯಲ್ಲಿ, “ಜೈಲಿನಲ್ಲಿ ಕನಿಷ್ಠ ಸೌಲಭ್ಯಗಳನ್ನೂ ಒದಗಿಸಿಲ್ಲ. ರಾತ್ರಿಯಿಡೀ ಮಲಗಲು ಸಾಧ್ಯವಾಗುತ್ತಿಲ್ಲ. ಹಾಸಿಗೆ, ದಿಂಬು ಒದಗಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕಳೆದ ವಾರ ಸೆಷನ್ಸ್ ಕೋರ್ಟ್, ಜೈಲು ಮ್ಯಾನ್ಯುಯಲ್‌ನಂತೆ ಕನಿಷ್ಠ ಸೌಲಭ್ಯಗಳನ್ನು ಒದಗಿಸುವಂತೆ ಆದೇಶಿಸಿತ್ತು. ಆದರೆ, ಆದೇಶದ ಜಾರಿಯ ಬಗ್ಗೆ ದರ್ಶನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಕೀಲ ಸುನೀಲ್ ಕುಮಾರ್ ಕೋರ್ಟ್‌ಗೆ ವಾದ ಮಂಡಿಸಿದ್ದು, ಜೈಲಿನ ಅಧಿಕಾರಿಗಳು ಕನಿಷ್ಠ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲರಾಗಿದ್ದಾರೆ. ಕ್ವಾರಂಟೈನ್ ಸೆಲ್‌ನಲ್ಲಿ ಒಂದು ತಿಂಗಳಿಗಿಂತಲೂ ಹೆಚ್ಚು ಕಾಲ ಇರಿಸಿರುವುದು ನಿಯಮಗಳ ಉಲ್ಲಂಘನೆಯಾಗಿದೆ.

ಮತ್ತೊಂದೆಡೆ, ಜೈಲಾಧಿಕಾರಿಗಳು ಈ ಆರೋಪಗಳ ಬಗ್ಗೆ ಚರ್ಚಿಸಲು ಸಭೆ ನಡೆಸಿದ್ದಾರೆ. ಆದರೆ, ದರ್ಶನ್‌ಗೆ ಸೂಕ್ತ ಸೌಲಭ್ಯ ಒದಗಿಸದಿರುವುದಕ್ಕೆ ಯಾವುದೇ ಸ್ಪಷ್ಟ ಉತ್ತರ ಸಿಕ್ಕಿಲ್ಲ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

3 hours ago

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

3 hours ago

ಓದುಗರ ಪತ್ರ: ಉದ್ಯೋಗ ವಯೋಮಿತಿ ಹೆಚ್ಚಳ ಸ್ವಾಗತಾರ್ಹ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…

3 hours ago

ಇಂದು ಕೇರಳ ಬೈತೂರು ದೇವಾಲಯದ ಪತ್ತೂಟ

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ…

3 hours ago

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

4 hours ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

4 hours ago