ರಾಜ್ಯ

ಡಿಸಿಎಂ ಡಿಕೆಶಿ ನಿವಾಸಕ್ಕೆ ನಟ ಕಿಚ್ಚ ಸುದೀಪ ಭೇಟಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ ಭೇಟಿ ಕೆಲ ಸಮಯ ಮಾತುಕತೆ ನಡೆಸಿದ್ದಾರೆ.

ಇಲ್ಲಿನ ಸದಾಶಿವನಗರದ ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಇಂದು(ಫೆಬ್ರವರಿ.6) ನಟ ಸುದೀಪ ಮತ್ತು ನಿರ್ದೇಶಕ ಅನೂಪ್‌ ಭಂಡಾರಿ ಅವರು ದಿಢೀರ್‌ ಭೇಟಿ ನೀಡಿದ್ದು, ಕೆಲಕಾಲ ಡಿಕೆಶಿ ಅವರೊಂದಿಗೆ ಮಾತುಕತೆ ಮಾಡಿದ್ದಾರೆ.

ಇನ್ನೂ ಫೆಬ್ರವರಿ.8 ರಿಂದ ಸಿಸಿಎಲ್‌(CCL) ಪಂದ್ಯ ಆರಂಭವಾಗಲಿದ್ದು, ಇದರ ಉದ್ಘಾಟನಾ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಆಹ್ವಾನ ನೀಡಲು ಬಂದಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.

ನಟ ಸುದೀಪ್‌ ಭೇಟಿ ಬಳಿಕ ಈ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಸುದೀಪ್‌ ಅವರು ತಮ್ಮ ನಿವಾಸಕ್ಕೆ ಸಿನಿಮಾದ ಬಗ್ಗೆ ಮಾತುಕತೆ ನಡೆಸಲು ಬಂದಿದ್ದರು ಎಂದು ಹೇಳಿದ್ದಾರೆ.

ಈ ಮಧ್ಯೆ ಇತ್ತೀಚೆಗೆ ನಟ ಕಿಚ್ಚ ಸುದೀಪ್‌ ಅವರನ್ನು ಕಾಂಗ್ರೆಸ್‌ ಪಕ್ಷಕ್ಕೆ ತರುವ ಪ್ರಯತ್ನ ನಡೆಯುತ್ತಿದೆ ಎಂಬ ಗಾಸಿಪ್‌ ಹರಡಿತ್ತು. ಆದರೆ ಇದೀಗ ಡಿ.ಕೆ.ಶಿವಕುಮಾರ್‌ ಅವರ ಮನೆಗೆ ನಟ ಸುದೀಪ್‌ ಅವರು ಭೇಟಿ ನೀಡಿರುವುದು ಕುತೂಹಲವನ್ನುಂಟು ಮಾಡಿದೆ.

ಅರ್ಚನ ಎಸ್‌ ಎಸ್

Recent Posts

ಶಿಷ್ಯವೇತನಕ್ಕೆ ಸಂಶೋಧಕರ ಆಗ್ರಹ : ಭಾನುವಾರ ಸಭೆ

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…

42 mins ago

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

3 hours ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

5 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

6 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

9 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

9 hours ago