ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ ಭೇಟಿ ಕೆಲ ಸಮಯ ಮಾತುಕತೆ ನಡೆಸಿದ್ದಾರೆ.
ಇಲ್ಲಿನ ಸದಾಶಿವನಗರದ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಇಂದು(ಫೆಬ್ರವರಿ.6) ನಟ ಸುದೀಪ ಮತ್ತು ನಿರ್ದೇಶಕ ಅನೂಪ್ ಭಂಡಾರಿ ಅವರು ದಿಢೀರ್ ಭೇಟಿ ನೀಡಿದ್ದು, ಕೆಲಕಾಲ ಡಿಕೆಶಿ ಅವರೊಂದಿಗೆ ಮಾತುಕತೆ ಮಾಡಿದ್ದಾರೆ.
ಇನ್ನೂ ಫೆಬ್ರವರಿ.8 ರಿಂದ ಸಿಸಿಎಲ್(CCL) ಪಂದ್ಯ ಆರಂಭವಾಗಲಿದ್ದು, ಇದರ ಉದ್ಘಾಟನಾ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಆಹ್ವಾನ ನೀಡಲು ಬಂದಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.
ನಟ ಸುದೀಪ್ ಭೇಟಿ ಬಳಿಕ ಈ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸುದೀಪ್ ಅವರು ತಮ್ಮ ನಿವಾಸಕ್ಕೆ ಸಿನಿಮಾದ ಬಗ್ಗೆ ಮಾತುಕತೆ ನಡೆಸಲು ಬಂದಿದ್ದರು ಎಂದು ಹೇಳಿದ್ದಾರೆ.
ಈ ಮಧ್ಯೆ ಇತ್ತೀಚೆಗೆ ನಟ ಕಿಚ್ಚ ಸುದೀಪ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ತರುವ ಪ್ರಯತ್ನ ನಡೆಯುತ್ತಿದೆ ಎಂಬ ಗಾಸಿಪ್ ಹರಡಿತ್ತು. ಆದರೆ ಇದೀಗ ಡಿ.ಕೆ.ಶಿವಕುಮಾರ್ ಅವರ ಮನೆಗೆ ನಟ ಸುದೀಪ್ ಅವರು ಭೇಟಿ ನೀಡಿರುವುದು ಕುತೂಹಲವನ್ನುಂಟು ಮಾಡಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…