ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿ ಇಂದಿಗೆ ನಾಲ್ಕು ವರ್ಷಗಳು ಕಳೆದಿದೆ.
ನಟ ಪುನೀತ್ ರಾಜ್ ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಇಂದು ಅಪ್ಪು ಸಮಾಧಿಗೆ ಪತ್ನಿ ಅಶ್ವಿನಿ ಸೇರಿದಂತೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.
ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿ ಬಳಿ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ. ಇಂದು ಬೆಳಿಗ್ಗೆ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಮಗಳ ಜೊತೆ ಸೇರಿ ಪತಿಯ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ವೇಳೆ ರಾಘವೇಂದ್ರ ರಾಜ್ಕುಮಾರ್, ವಿನಯ್ ರಾಜ್ ಕುಮಾರ್ ಸೇರಿದಂತೆ ರಾಜ್ ಕುಟುಂಬಸ್ಥರು ಉಪಸ್ಥಿತರಿದ್ದರು.
ಇದನ್ನೂ ಓದಿ:-ಹುಣಸೂರು| ಜಮೀನಿಗೆ ಹೋದಾಗ ದುರಂತ: ವಿದ್ಯುತ್ ತಂತಿ ತುಳಿದು ತಾಯಿ, ಮಗ ಸಾವು
ಪುನೀತ್ ರಾಜ್ಕುಮಾರ್ಗೆ ಇಷ್ಟವಾಗಿದ್ದ ತಿಂಡಿ-ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಸಲಾಯಿತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾಗರೋಪಾದಿಯಲ್ಲಿ ಆಗಮಿಸುತ್ತಿರುವ ಅಪ್ಪು ಅಭಿಮಾನಿಗಳು ಅಪ್ಪು ಸಮಾಧಿ ಬಳಿ ಆಗಮಿಸಿ ಪುಷ್ಪ ನಮನ ಸಲ್ಲಿಸುತ್ತಿದ್ದಾರೆ.
ಇನ್ನು ಪುನೀತ್ ರಾಜ್ಕುಮಾರ್ ಪುಣ್ಯ ಸ್ಮರಣೆಯ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಇಂದು ಅನ್ನದಾನ ಮಾಡಲಾಗುತ್ತಿದ್ದು, ಹಲವೆಡೆ ರಕ್ತದಾನ ಶಿಬಿರಗಳು ಕೂಡ ನಡೆಯುತ್ತಿವೆ.
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…
ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…
ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…
ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…
ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…