ಶಿವಮೊಗ್ಗ: ನಟ ಶಿವರಾಜ್ಕುಮಾರ್ ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ಶಿವಮೊಗ್ಗ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿದ್ದು, ಏಪ್ರಿಲ್ 15 ಅವರು ನಾಮಪತ್ರ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಿಮ್ಮನೆ ರತ್ನಾಕರ್ ಮುಂತಾದವರು ಗೀತಾಗೆ ಸಾಥ್ ನೀಡಿದ್ದಾರೆ. ಗೀತಾ ಪರವಾಗಿ ಅವರ ಪತಿ ಶಿವರಾಜ್ಕುಮಾರ್ ಅವರು ಜಿಲ್ಲೆಯಾದ್ಯಂತ ಪ್ರಚಾರ ಮಾಡುತ್ತಿದ್ದಾರೆ.
ಗೀತಾ ನಾಮಪತ್ರ ಸಲ್ಲಿಸಿದ ಬಳಿಕ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿ, ಶಿವಮೊಗ್ಗದ ಜನತೆಗೆ ಧನ್ಯವಾದ ತಿಳಿಸಿದ್ದಾರೆ. ನಾಮಪತ್ರ ಸಲ್ಲಿಸುವಾಗ ಇಷ್ಟೊಂದು ಜನರು ಪ್ರೀತಿ-ವಿಶ್ವಾಸದಿಂದ ಬಂದಿರುವುದು ನೋಡಿದರೆ ಶಿವಮೊಗ್ಗದಲ್ಲಿ ಬದಲಾವಣೆ ಬೇಕು ಅಂತ ಅವರೆಲ್ಲರೂ ಬಯಸಿದ್ದಾರೆ. ಜನ ನಗುವಿನ ಮುಖದಲ್ಲಿ ಬದಲಾವಣೆ ಕೇಳುತ್ತಿದ್ದಾರೆ ಎಂಬುದು ನನ್ನ ಭಾವನೆ. ನಿಮ್ಮಲ್ಲರ ಆಶೀರ್ವಾದ ಬೇಕು. ಗೀತಾ ಖಂಡಿತಾ ಗೆಲ್ಲುತ್ತಾರೆ ಎಂದು ಶಿವರಾಜ್ಕುಮಾರ್ ಹೇಳಿದ್ದಾರೆ.
ಇಂದು ನಾನು ನಾಮಪತ್ರ ಸಲ್ಲಿಸಿ ಬಂದಿದ್ದೇನೆ. ನಮ್ಮ ಪಕ್ಷದ ಡಿ.ಕೆ. ಶಿವಕುಮಾರ್ ಅವರಿಗೆ ಧನ್ಯವಾದ ಹೇಳುತ್ತೇನೆ. ಎಲ್ಲ ಕಾರ್ಯಕರ್ತರಿಗೆ ನನ್ನ ನಮಸ್ಕಾರ. ಮತದಾರರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ಅವರೆಲ್ಲರ ಆಶೀರ್ವಾದ ನಮ್ಮ ಪಕ್ಷ ಮತ್ತು ನನ್ನ ಮೇಲೆ ಇರಲಿ ಅಂತ ಕೇಳಿಕೊಳ್ಳುತ್ತೇನೆ ಎಂದು ಗೀತಾ ಶಿವರಾಜ್ಕುಮಾರ್ ಹೇಳಿದ್ದಾರೆ.
ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…
ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್ನಿಂದ ನೋಟಿಸ್…
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…