ರಾಜ್ಯ

ಗೀತಾ ನಾಮಪತ್ರ ಸಲ್ಲಿಕೆ: ಶಿವಮೊಗ್ಗ ಜನತೆಗೆ ಧನ್ಯವಾದ ತಿಳಿಸಿದ ಶಿವಣ್ಣ

ಶಿವಮೊಗ್ಗ: ನಟ ಶಿವರಾಜ್‌ಕುಮಾರ್‌ ಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ಶಿವಮೊಗ್ಗ ಲೋಕಸಭಾ ಚುನಾವಣೆಯ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿದ್ದು, ಏಪ್ರಿಲ್​ 15 ಅವರು ನಾಮಪತ್ರ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಿಮ್ಮನೆ ರತ್ನಾಕರ್​ ಮುಂತಾದವರು ಗೀತಾಗೆ ಸಾಥ್​ ನೀಡಿದ್ದಾರೆ. ಗೀತಾ ಪರವಾಗಿ ಅವರ ಪತಿ ಶಿವರಾಜ್​ಕುಮಾರ್​ ಅವರು ಜಿಲ್ಲೆಯಾದ್ಯಂತ ಪ್ರಚಾರ ಮಾಡುತ್ತಿದ್ದಾರೆ.

ಗೀತಾ ನಾಮಪತ್ರ ಸಲ್ಲಿಸಿದ ಬಳಿಕ ಶಿವರಾಜ್‌ ಕುಮಾರ್‌ ಪ್ರತಿಕ್ರಿಯೆ ನೀಡಿ, ಶಿವಮೊಗ್ಗದ ಜನತೆಗೆ ಧನ್ಯವಾದ ತಿಳಿಸಿದ್ದಾರೆ. ನಾಮಪತ್ರ ಸಲ್ಲಿಸುವಾಗ ಇಷ್ಟೊಂದು ಜನರು ಪ್ರೀತಿ-ವಿಶ್ವಾಸದಿಂದ ಬಂದಿರುವುದು ನೋಡಿದರೆ ಶಿವಮೊಗ್ಗದಲ್ಲಿ ಬದಲಾವಣೆ ಬೇಕು ಅಂತ ಅವರೆಲ್ಲರೂ ಬಯಸಿದ್ದಾರೆ. ಜನ ನಗುವಿನ ಮುಖದಲ್ಲಿ ಬದಲಾವಣೆ ಕೇಳುತ್ತಿದ್ದಾರೆ ಎಂಬುದು ನನ್ನ ಭಾವನೆ. ನಿಮ್ಮಲ್ಲರ ಆಶೀರ್ವಾದ ಬೇಕು. ಗೀತಾ ಖಂಡಿತಾ ಗೆಲ್ಲುತ್ತಾರೆ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

ಇಂದು ನಾನು ನಾಮಪತ್ರ ಸಲ್ಲಿಸಿ ಬಂದಿದ್ದೇನೆ. ನಮ್ಮ ಪಕ್ಷದ ಡಿ.ಕೆ. ಶಿವಕುಮಾರ್​ ಅವರಿಗೆ ಧನ್ಯವಾದ ಹೇಳುತ್ತೇನೆ. ಎಲ್ಲ ಕಾರ್ಯಕರ್ತರಿಗೆ ನನ್ನ ನಮಸ್ಕಾರ. ಮತದಾರರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ಅವರೆಲ್ಲರ ಆಶೀರ್ವಾದ ನಮ್ಮ ಪಕ್ಷ ಮತ್ತು ನನ್ನ ಮೇಲೆ ಇರಲಿ ಅಂತ ಕೇಳಿಕೊಳ್ಳುತ್ತೇನೆ ಎಂದು ಗೀತಾ ಶಿವರಾಜ್​ಕುಮಾರ್​ ಹೇಳಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

2 mins ago

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…

29 mins ago

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

4 hours ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

9 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

9 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

9 hours ago