ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ದಂಪತಿಗಳ ಮೊಬೈಲ್ ಹ್ಯಾಕ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದ ಪೊಲೀಸರು ಬಿಹಾರ ಮೂಲದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಫೋನ್ ಹ್ಯಾಕ್ ಆಗಿತ್ತು. ಕಿಡಿಗೇಡಿಗಳು ದಂಪತಿಯ ಫೋನ್ ನಂಬರ್ ಹ್ಯಾಕ್ ಮಾಡಿದ್ದು, ಹಣ ಹಾಕುವಂತೆ ಮೆಸೇಜ್ಗಳ ಮೂಲಕ ಕೇಳಿದ್ದರು.
ಈ ಬಗ್ಗೆ ನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ವಿಡಿಯೋ ಮೂಲಕ ಮಾಹಿತಿ ನೀಡಿದ್ದು, ನನ್ನ ಹಾಗೂ ಪತ್ನಿ ಪ್ರಿಯಾಂಕಾ ಅವರ ಫೋನ್ ನಂಬರ್ಗಳನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ. ಫೋನ್ ಮೂಲಕ ಬರಿ ಸಂದೇಶಗಳನ್ನು ಕಳುಹಿಸುತ್ತಿದ್ದು, ಅರ್ಜೆಂಟಾಗಿ ಹಣ ನೀಡುವಂತೆ ಮೆಸೇಜ್ ಕಳುಹಿಸುತ್ತಿದ್ದಾರೆ.
ಇದನ್ನು ಓದಿ: ನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಫೋನ್ ನಂಬರ್ ಹ್ಯಾಕ್
ನಮ್ಮ ಫೋನ್ ನಂಬರ್ಗಳಿಂದ ಕರೆ ಅಥವಾ ಮೆಸೇಜ್ ಬಂದರೆ ದಯವಿಟ್ಟು ಯಾರೂ ಹಣ ಹಾಕಬೇಡಿ. ಫೋನ್ ನಂಬರ್ ಹ್ಯಾಕ್ ಆಗಿದೆ ಎಂದು ಮನವಿ ಮಾಡಿದ್ದರು. ಅಲ್ಲದೇ ಫೋನ್ ನಂಬರ್ ಹ್ಯಾಕ್ ಆಗಿರುವ ಬಗ್ಗೆ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಬಿಹಾರಿ ಹ್ಯಾಕರ್ಗಳು ಈ ಕೃತ್ಯ ಎಸಗಿರುವುದು ತನಿಖೆಯಲ್ಲಿ ಬಯಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ವಿಶೇಷ ತಂಡವನ್ನು ಬಿಹಾರಕ್ಕೆ ಕಳುಹಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲಕ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ವಿಕಾಸ್ ಕುಮಾರ್ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ತನಿಖೆ ಮುಂದುವರಿದಿದೆ.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…