ಬೆಂಗಳೂರು: ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವು ಮಾಡಿದ್ದಕ್ಕೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರನ್ನು ನಿಂದಿಸಿ, ಜೀವ ಬೆದರಿಕೆ ಹಾಕಿದ್ದ ಪ್ರಕರಣದ ಬೆನ್ನಲ್ಲೇ ನಟ ಝೈದ್ ಖಾನ್ ಕ್ಷಮೆ ಕೇಳಿದ್ದಾರೆ.
ಝೈದ್ ಖಾನ್ ಅಭಿನಯದ ಕಲ್ಟ್ ಸಿನಿಮಾದ ಈವೆಂಟ್ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಫ್ಲೆಕ್ಸ್, ಬ್ಯಾನರ್ಗಳನ್ನು ಅಳವಡಿಸಲಾಗಿತ್ತು.
ಅಕ್ರಮವಾಗಿ ಅಳವಡಿಸಿದ್ದ ಒಂದು ಬ್ಯಾನರ್ ತೆರವುಗೊಳಿಸಿದ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪೌರಾಯುಕ್ತೆ ಅಮೃತಾ ಅವರಿಗೆ ಕರೆ ಮಾಡಿ ನಿಂದಿಸಿ, ಜೀವ ಬೆದರಿಕೆ ಹಾಕಿದ್ದರು.
ಈ ಪ್ರಕರಣ ಭಾರೀ ಸುದ್ದಿಯಾಗಿದುದ, ರಾಜೀವ್ ಗೌಡ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದೆ. ಬಂಧನಕ್ಕಾಗಿ ಪೊಲೀಸರು ವಿಶೇಷ ತಂಡ ರಚನೆ ಮಾಡಿದ್ದು, ರಾಜೀವ್ಗೌಡ ತಲೆಮರೆಸಿಕೊಂಡು ನಾಪತ್ತೆಯಾಗಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಘಟನೆ ಬಗ್ಗೆ ನಟ ಝೈದ್ ಖಾನ್ ಪ್ರತಿಕ್ರಿಯೆ ನೀಡಿದ್ದು, ಘಟನೆ ಬಗ್ಗೆ ನನ್ನ ಅಭಿಮಾನಿಗಳ ಪರವಾಗಿ ನಾನು ಕ್ಷಮೆ ಕೇಳುತ್ತೇನೆ. ಈ ಘಟನೆ ಬಗ್ಗೆ ನನಗೆ ತಿಳಿದಿರಲಿಲ್ಲ. ಘಟನೆ ನಡೆಯಬಾರದಿತ್ತು. ನಡೆದು ಹೋಗಿದೆ. ಅಭಿಮಾನಿಗಳ ಪರವಾಗಿ ನಾನು ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ.
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಮೂರನೇ ದಿನಕ್ಕೆ ಕಾಲಿಟ್ಟಿದೆ. ಮೂರನೇ ದಿನವಾದ…
ಮಂಡ್ಯ: 11 ತಿಂಗಳ ಬಂಡೂರು ಕುರಿಯನ್ನು 1 ಲಕ್ಷದ 35 ಸಾವಿರ ರೂಪಾಯಿ ದಾಖಲೆ ಮೊತ್ತಕ್ಕೆ ಮಂಡ್ಯ ಜಿಲ್ಲೆ ಮಳವಳ್ಳಿ…
ಬೆಂಗಳೂರು: ಮಾಜಿ ಸಚಿವ ಕೆ.ಎನ್.ರಾಜಣ್ಣ ಮನೆಯಲ್ಲಿ ಔತಣಕೂಟದ ವೇಳೆ ನಾವು ರಾಜಕೀಯ ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ…
ಮೈಸೂರು: ಮಹಾರಾಷ್ಟ್ರದ ಮುಂಬೈ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಜಯ ದೊರೆತಿರುವ ಹಿನ್ನೆಲೆಯಲ್ಲಿ ಮೈಸೂರು ಮಾಜಿ ಮೇಯರ್ ಶಿವಕುಮಾರ್…
ಬೆಂಗಳೂರು: ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ರಾತ್ರಿ ಬನ್ನೇರುಘಟ್ಟ ಠಾಣೆಯ ಪೊಲೀಸರು…
ಮುಂಬರುವ ಪಠ್ಯಪುಸ್ತಕ ತಯಾರಿ ಅಥವಾ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಟ ಪುನೀತ್ ರಾಜ್ಕುಮಾರ್ ಅವರ ಜೀವನ ಮತ್ತು ಸಾಧನೆಗಳ ಕುರಿತ ವಿಷಯಗಳನ್ನು…