ಬೆಂಗಳೂರು: ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವು ಮಾಡಿದ್ದಕ್ಕೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರನ್ನು ನಿಂದಿಸಿ, ಜೀವ ಬೆದರಿಕೆ ಹಾಕಿದ್ದ ಪ್ರಕರಣದ ಬೆನ್ನಲ್ಲೇ ನಟ ಝೈದ್ ಖಾನ್ ಕ್ಷಮೆ ಕೇಳಿದ್ದಾರೆ.
ಝೈದ್ ಖಾನ್ ಅಭಿನಯದ ಕಲ್ಟ್ ಸಿನಿಮಾದ ಈವೆಂಟ್ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಫ್ಲೆಕ್ಸ್, ಬ್ಯಾನರ್ಗಳನ್ನು ಅಳವಡಿಸಲಾಗಿತ್ತು.
ಅಕ್ರಮವಾಗಿ ಅಳವಡಿಸಿದ್ದ ಒಂದು ಬ್ಯಾನರ್ ತೆರವುಗೊಳಿಸಿದ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪೌರಾಯುಕ್ತೆ ಅಮೃತಾ ಅವರಿಗೆ ಕರೆ ಮಾಡಿ ನಿಂದಿಸಿ, ಜೀವ ಬೆದರಿಕೆ ಹಾಕಿದ್ದರು.
ಈ ಪ್ರಕರಣ ಭಾರೀ ಸುದ್ದಿಯಾಗಿದುದ, ರಾಜೀವ್ ಗೌಡ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದೆ. ಬಂಧನಕ್ಕಾಗಿ ಪೊಲೀಸರು ವಿಶೇಷ ತಂಡ ರಚನೆ ಮಾಡಿದ್ದು, ರಾಜೀವ್ಗೌಡ ತಲೆಮರೆಸಿಕೊಂಡು ನಾಪತ್ತೆಯಾಗಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಘಟನೆ ಬಗ್ಗೆ ನಟ ಝೈದ್ ಖಾನ್ ಪ್ರತಿಕ್ರಿಯೆ ನೀಡಿದ್ದು, ಘಟನೆ ಬಗ್ಗೆ ನನ್ನ ಅಭಿಮಾನಿಗಳ ಪರವಾಗಿ ನಾನು ಕ್ಷಮೆ ಕೇಳುತ್ತೇನೆ. ಈ ಘಟನೆ ಬಗ್ಗೆ ನನಗೆ ತಿಳಿದಿರಲಿಲ್ಲ. ಘಟನೆ ನಡೆಯಬಾರದಿತ್ತು. ನಡೆದು ಹೋಗಿದೆ. ಅಭಿಮಾನಿಗಳ ಪರವಾಗಿ ನಾನು ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…