ರಾಜ್ಯ

ಕೊಲೆ ಪ್ರಕರಣದಲ್ಲಿ ದರ್ಶನ್‌ ಬಂಧನ: ನಟಿ ರಚಿತಾ ರಾಮ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಡಿಯಲ್ಲಿ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ.

ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಕಾರಣಕ್ಕೆ ಕರೆತಂದು ಹಲ್ಲೆ ನಡೆಸಿ ಹತ್ಯೆ ಮಾಡಿ ಮೋರಿ ಸಮೀಪ ಬಿಸಾಕಿದ್ದಾರೆ ಎಂಬ ಆರೋಪ ಡಿ ಗ್ಯಾಂಗ್‌ ಮೇಲಿದೆ. ಹೀಗೆ ಆರೋಪ ಎದುರಿಸುತ್ತಾ ಕಳೆದೊಂದು ವಾರದಿಂದ ಸತತವಾಗಿ ಪೊಲೀಸರ ವಿಚಾರಣೆಗೆ ಒಳಗಾಗಿರುವ ದರ್ಶನ್‌ ವಿರುದ್ಧ ಹಲವೆಡೆ ಪ್ರತಿಭಟನೆಗಳು ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಇನ್ನು ಈ ಪ್ರಕರಣದ ಬಗ್ಗೆ ಕೆಲವೇ ಕಲಾವಿದರು ಮಾತ್ರ ಪ್ರತಿಕ್ರಿಯಿಸಿದ್ದು, ಇದೀಗ ನಟಿ ರಚಿತಾ ರಾಮ್‌ ಸಹ ಈ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ರಚಿತಾರಾಮ್‌ ಈ ನೋಟ್‌ ಅನ್ನು ನಾನು ನಟಿಯಾಗಿ ಬರೆಯುತ್ತಿಲ್ಲ, ಓರ್ವ ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ ಎಂದು ಬರೆದುಕೊಂಡಿದ್ದು, ರೇಣುಕಾಸ್ವಾಮಿಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ನನಗಿದೆ ಎಂದಿದ್ದಾರೆ. ಅಲ್ಲದೇ ತನ್ನನ್ನು ಚಿತ್ರರಂಗಕ್ಕೆ ಕರೆತಂದ ದರ್ಶನ್‌ ತನ್ನ ಗುರು ಸಮಾನ, ಅವರು ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದು ಕಷ್ಟಕರ, ಸತ್ಯ ಪೊಲೀಸ್‌ ತನಿಖೆಯಿಂದ ಆಚೆ ಬರಲಿ ಎಂದು ಆಶಿಸಿದ್ದಾರೆ.

ರಚಿತಾ ಪೋಸ್ಟ್‌ ಹೀಗಿದೆ:

ನಮಸ್ಕಾರ
ಈ ನೋಟ್‌ನ ನಾನು ನಟಿಯಾಗಿ ಅಲ್ಲ ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತೀಚಿಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು!

ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ.

ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್ ನನಗೆ ಗುರು ಸಮಾನರು, ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸ್ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೆ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತಿರಿ ಮತ್ತು ನಿಶ್ಚಕ್ಷವಾಗಿ ಕೆಲಸ ಮಾಡುತ್ತಿರಿ ಎಂದು ಆಶಿಸುತ್ತೇನೆ..

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

2 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

2 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

2 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

5 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

5 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

5 hours ago