ರಾಜ್ಯ

ನಟಿ ರನ್ಯಾ ರಾವ್‌ ಚಿನ್ನ ಸಾಗಣೆ ಪ್ರಕರಣ ʻಇ.ಡಿʼಗೆ ವರ್ಗಾ?

ಬೆಂಗಳೂರು :  ದುಬೈಯಿಂದ ಬೆಂಗಳೂರಿಗೆ ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್‌ ಅವರಿದ್ದ ಫ್ಲ್ಯಾಟ್‌ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಚಿನ್ನ ಹಾಗೂ ನಗದು ವಶಪಡಿಸಿಕೊಂಡಿದ್ದೇವೆ. ಸದ್ಯ ಈ ಪ್ರಕರಣವನ್ನು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ)  ವರ್ಗಾವಣೆ ಮಾಡಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಇತಿಹಾಸದಲ್ಲೇ ಒಂದೇ ಪ್ರಕರಣದಲ್ಲಿ ಇಷ್ಟೊಂದು ಅಪಾರ ಪ್ರಮಾಣದ ಚಿನ್ನವನ್ನು ಮೊದಲ ಬಾರಿಗೆ  ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಫ್ಲ್ಯಾಟ್‌ನಲ್ಲಿಯೂ  ಕೂಡ ಅಪಾರ ಪ್ರಮಾಣದ ನಗದು ಸಿಕ್ಕಿದ್ದು ಪ್ರಕರಣವನ್ನು ಜಾರಿ ನಿರ್ದೇಶನಾಲಯಯಕ್ಕೆ ವರ್ಗಾಯಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

15 ದಿನದಲ್ಲಿ ನಾಲ್ಕು ಬಾರಿ ದುಬೈಗೆ 

ಒಂದು ವರ್ಷದಲ್ಲಿ ರನ್ಯಾ ರಾವ್‌ ಅವರು 10ಕ್ಕೂ ಹೆಚ್ಚು ಬಾರಿ ದುಬೈಗೆ ಹೋಗಿ ಬಂದಿದ್ದಾರೆ.  ಪ್ರತಿ ಬಾರಿ ಬಂದಾಗಲೂ ಚಿನ್ನವನ್ನು ಕಳ್ಳ ಸಾಗಣೆ ಮೂಲಕ ತಂದಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ. ಸೋಮವಾರ ತಪಾಸಣೆ ನಡೆಸಿದಾಗ ರನ್ಯಾ ರಾವ್‌ ಅವರು ಹೆಚ್ಚಿನ ಚಿನ್ನಭರಣಗಳನ್ನು ಧರಿಸಿದ್ದರು. ಉಳಿದ ಚಿನ್ನವನ್ನು ಬಟ್ಟೆಯಲ್ಲಿ ಬಚ್ಚಿಟ್ಟುಕೊಂಡಿದ್ದರು ಎಂದು ಡಿಆರ್‌ಐ ಮೂಲಗಳು ತಿಳಿಸಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

13 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

14 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago