ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ ಹೆಚ್ಚುವರಿ 1122 ಸೀಟುಗಳು ದೊರೆಯಲಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.
ಇಂದು ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ನಮ್ಮ ರಾಜ್ಯ ವೈದ್ಯಕೀಯ ಕ್ಷೇತ್ರದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದರು.
ರಾಜ್ಯಕ್ಕೆ ದೊರೆತಿರುವ ಹೆಚ್ಚುವರಿ ಸೀಟುಗಳು ಕೊಪ್ಪಳ, ಗದಗ, ಚಾಮರಾಜನಗರ, ಕಾರವಾರ, ಕಾವೇರಿ ಸೇರಿ ಇತರೆ ಜಿಲ್ಲೆಗಳಿಗೆ ದೊರೆಯಲಿದೆ ಎಂದು ತಿಳಿಸಿದರು.
ಪದವಿಪೂರ್ವ ಸೀಟುಗಳಿಗೆ ಕೇಂದ್ರ ಸರ್ಕಾರದಿಂದ 495 ಕೋಟಿ ರೂ. ಅನುದಾನ ಸಿಗಲಿದೆ. ಅದೇ ರೀತಿ ಸ್ನಾತಕೋತ್ತರ ವೈದ್ಯಕೀಯ ಸೀಟುಗಳಿಗೆ 541 ಕೋಟಿ ರೂಪಾಯಿ ಅನುದಾನ ಸಿಗಲಿದೆ ಎಂದು ಡಾ. ಪಾಟೀಲ್ ವಿವರಿಸಿದರು.
ಕೇಂದ್ರ ಮತ್ತು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯು ಮೇ.15ರಂದು ಅಂತಿಮ ಮುದ್ರೆ ಹಾಕಿದೆ. ಒಟ್ಟಾರೆಯಾಗಿ ರಾಜ್ಯಕ್ಕೆ 1090 ಕೋಟಿ ರೂಪಾಯಿ ದೊರೆಯಲಿದೆ ಎಂದು ಹೇಳಿದರು.
ಒಂದು ಸಾವಿರ ಮೆಡಿಕಲ್ ಸೀಟ್ ಒಂದು ರಾಜ್ಯಕ್ಕೆ ಸಿಕ್ಕಿರುವುದು ದಾಖಲೆಯಾಗಿದೆ. ಕರ್ನಾಟಕದ ಸಾಧನೆಗೆ ಇದು ಪೂರಕವಾದ ಸಾಕ್ಷಿಯಾಗಿದೆ ಎಂದು ಡಾ. ಪಾಟೀಲ್ ಹೇಳಿದರು.
ವೈದ್ಯ ಕ್ಷೇತ್ರದಲ್ಲಿ ಸಾಧನೆ ಮಾಡುವವರಿಗೆ ಅತಿ ಹೆಚ್ಚು ಸಾಧನೆ ಮಾಡಲು ಕರ್ನಾಟಕದಲ್ಲಿ ಈಗ ವಿಫುಲ ಅವಕಾಶಗಳು ದೊರೆತಂತಾಗುತ್ತದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…