ಬೆಳಗಾವಿ : ನಾಗರಿಕರ ಹಿತದೃಷ್ಠಿ ಮತ್ತು ಸುರಕ್ಷತೆಗಾಗಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಹೆಚ್ಚುವರಿ ೨೫೦೦ ಸಿಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಗುರುವಾರ ವಿಧಾನ ಪರಿಷತ್ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯರಾದ ಭಾರತಿ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ಬೆಂಗಳೂರಿನಲ್ಲಿ ನಾಗರಿಕರ ಸುರಕ್ಷತೆಗಾಗಿ ಈಗಾಗಲೇ ೭೫೦೦ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇದರ ಕಾರ್ಯಾಚರಣೆಗಾಗಿ ಕಮಾಂಡರ್ ಸೆಂಟರ್ನಲ್ಲಿ ವೀಕ್ಷಣೆ ಮಾಡಲು ಸಿಬ್ಬಂದಿಗಳನ್ನು ಅಳವಡಿಸಲಾಗಿದೆ. ಕೇಂದ್ರ ಸರ್ಕಾರದ ನಿರ್ಭಯಾ ಯೋಜನೆಯಡಿಯಲ್ಲಿ ಹೆಚ್ಚುವರಿಯಾಗಿ ೨೫೦೦ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗುವುದು ಎಂದು ಉತ್ತರಿಸಿದರು.
ಉನ್ನತ ಗುಣಮಟ್ಟದ ಸಿಸಿ ಕ್ಯಾಮರಾಗಳು ಇದಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ವಾಣಿಜ್ಯ ಕಟ್ಟಡ, ಪ್ರದೇಶಗಳು, ಶಾಲಾ-ಕಾಲೇಜುಗಳು, ಸರ್ಕಾರಿ ಕಟ್ಟಡ, ಬಸ್ ನಿಲ್ದಾಣಗಳು ಸೇರಿದಂತೆ ಹಲವು ಕಡೆಗಳಲ್ಲಿ ಅಳವಡಿಸಿ ವಿಶೇಷ ನಿಗಾ ಇರಿಸಲಾಗಿದೆ ಎಂದು ಪರಮೇಶ್ವರ್ ಹೇಳಿದರು.
ಮೇಲುಕೋಟೆ : ವಿಶ್ವವಿಖ್ಯಾತ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಕಿರೀಟಧಾರಣಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಪೂರ್ವಭಾವಿಯಾಗಿ, ಜಿಲ್ಲಾ ಖಜಾನೆಯಿಂದ…
ಎಚ್.ಡಿ.ಕೋಟೆ : ಪತಿ ಮೃತಪಟ್ಟ ಮಾರನೇ ದಿನವೇ ಶಿಕ್ಷಕಿಯೊಬ್ಬರು ಶಾಲೆಗೆ ಹಾಜರಾಗಿ ಕರ್ತವ್ಯ ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಂಪಾಪುರ ಸಮೀಪದ…
ಹೊಸದಿಲ್ಲಿ : ಇರಾನ್ ಸಂಘರ್ಷದಿಂದಾಗಿ ಉಂಟಾದ ಅಂತರರಾಷ್ಟ್ರೀಯ ಅನಿಲ ಪೂರೈಕೆ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ವಾಣಿಜ್ಯ ಎಲ್ಪಿಜಿ ಪೂರೈಕೆಯನ್ನು…
ಮೈಸೂರು : ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕ ಘಟಕ ಮತ್ತು ಡ್ರಗ್ಸ್ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿತ್ತು. ಆದರೆ, ಇದೀಗ…
ಮೈಸೂರು : ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…
ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…